Breaking News
Home / ಜಿಲ್ಲೆ / ಬೆಂಗಳೂರು / ಸಂಪೂರ್ಣ ಲಾಕ್​​ಡೌನ್​ಗೆ ಸಿದ್ಧತೆ: 2 ತಿಂಗಳು ಹೆಚ್ಚುವರಿ ಪಡಿತರ ವಿತರಣೆಗೆ ಪ್ಲಾನ್..?

ಸಂಪೂರ್ಣ ಲಾಕ್​​ಡೌನ್​ಗೆ ಸಿದ್ಧತೆ: 2 ತಿಂಗಳು ಹೆಚ್ಚುವರಿ ಪಡಿತರ ವಿತರಣೆಗೆ ಪ್ಲಾನ್..?

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕರ್ಫ್ಯೂ ಹೆಸರಿನ ಸೆಮಿ ಲಾಕ್​ಡೌನ್​ನಿಂದ ಸೋಂಕು ಕಂಟ್ರೋಲ್​ ಬರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಲಾಕ್​ಡೌನ್​ ಮೊರೆ ಹೋಗುತ್ತಿದೆ. ಉನ್ನತ ಮೂಲಕ ಮಾಹಿತಿಗಳ ಪ್ರಕಾರ ರಾಜ್ಯಾದ್ಯಂತ ಕಠಿಣ ಲಾಕ್​ಡೌನ್​ ಜಾರಿಗೊಳಿಸಲು ಸಿದ್ಧತೆಗಳು ನಡೆಯುತ್ತಿದೆ. ಸಿಎಂ ಬಿ.ಎಸ್​.ಯಡಿಯೂರಪ್ಪ ಸರ್ಕಾರ ಲಾಕ್​ಡೌನ್​ಗೆ ಸಮ್ಮತಿ ಸೂಚಿಸಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ಲಾಕ್​ಡೌನ್​ ಸಮಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಪಡಿತರ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳ ಆಹಾರ ಧಾನ್ಯ ವಿತರಣೆಗೆ ಸರ್ಕಾರ ಪ್ಲಾನ್ ಮಾಡುತ್ತಿದೆ.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ‌ ಪಡಿತರ ವಿತರಣೆಗೆ ತಯಾರಿ ನಡೆದಿದೆ. ಮುಂದಿನ 2 ತಿಂಗಳು ಹೆಚ್ಚುವರಿ ಪಡಿತರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೇ 11ರಿಂದಲೇ ಹೆಚ್ಚುವರಿ ಅಕ್ಕಿ-ಬೇಳೆ ನೀಡಲು ಮುಂದಾಗುವ ಸಾಧ್ಯತೆ ಇದೆ. ಬಿಪಿಎಲ್, ಅಂತ್ಯೋದಯ ಕಾರ್ಡುದಾರರಿಗೆ ಹೆಚ್ಚುವರಿ ಅಕ್ಕಿ ವಿತರಣೆ ಮಾಡಲಾಗುವುದು. ಮೇ-ಜೂನ್‍ನಲ್ಲಿ ಹೆಚ್ಚುವರಿ ಅಕ್ಕಿ, ರಾಗಿ, ಗೋಧಿ, ಜೋಳ ನೀಡಲಾಗುವುದು. ಅಂತ್ಯೋದಯ ಸ್ಕೀಂನಲ್ಲಿ ಮೇ, ಜೂನ್‍ನಲ್ಲಿ ತಲಾ 35 ಕೆಜಿ ಅಕ್ಕಿ ಹಾಗೂ ಬಿಪಿಎಲ್ ಕಾರ್ಡ್‍ಗೆ ತಲಾ ಒಬ್ಬರಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವ ಸಾಧ್ಯತೆ ಇದೆ. ಕೇಂದ್ರದ 5 ಕೆಜಿ, ರಾಜ್ಯದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ವಿತರಿಸಲು ಪ್ಲಾನ್ ಮಾಡಲಾಗಿದೆ. ರಾಗಿ ಬಳಸುವ ಪ್ರದೇಶದಲ್ಲಿ 3 ಕೆಜಿ ರಾಗಿ, 7 ಕೆಜಿ ಅಕ್ಕಿ, 2 ಕೆಜಿ ಗೋಧಿಯನ್ನು ನೀಡಲಾಗುವುದು. ಅಕ್ಕಿಯನ್ನು ಬಳಸುವ ಭಾಗದಲ್ಲಿ 7 ಕೆಜಿ ಅಕ್ಕಿ, 3 ಕೆಜಿ ಜೋಳ, 3 ಕೆಜಿ ಗೋಧಿ ವಿತರಿಸಲು ಪ್ಲಾನ್​ ಮಾಡಲಾಗುತ್ತಿದೆ.

ಕರ್ನಾಟಕದಲ್ಲಿ ದಿನವೊಂದಕ್ಕೆ ಅರ್ಧ ಲಕ್ಷದಷ್ಟು ಕೊರೋನಾ ಕೇಸುಗಳು ದಾಖಲಾಗುತ್ತಿರುವುದರಿಂದ ಇನ್ನೂ 14 ದಿನಗಳ ಕಾಲ ಕರ್ನಾಟಕದಲ್ಲಿ ಸಂಪೂರ್ಣ ಲಾಕ್​ಡೌನ್ ಘೋಷಿಸಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈಗಾಗಲೇ ಮೇ 12ರವರೆಗೂ ಜನತಾ ಕರ್ಫ್ಯೂ ಜಾರಿಯಲ್ಲಿದ್ದು, ಇದರಿಂದಲೂ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಮೇ 10ರಿಂದ 2 ವಾರಗಳ ಕಾಲ ಕಠಿಣ ಲಾಕ್​ಡೌನ್ ಜಾರಿಗೊಳಿಸಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ಈಗಾಗಲೇ ಸಚಿವರು, ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಸಿಎಂ ಯಡಿಯೂರಪ್ಪ ಲಾಕ್​ಡೌನ್ ಜಾರಿಗೊಳಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲವೇ ಹೊತ್ತಿನಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಸೆಮಿ ಲಾಕ್​ಡೌನ್​ನಿಂದ ಯಾವುದೇ ಉಪಯೋಗವಾಗದ ಕಾರಣ ಸೋಮವಾರದಿಂದ ಸಂಪೂರ್ಣ ಲಾಕ್​ಡೌನ್ ಮಾಡಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕೊರೋನಾ ಮೊದಲ ಅಲೆಯ ಮಾದರಿಯಲ್ಲೇ 14 ದಿನಗಳ ಕಾಲ ಲಾಕ್​ಡೌನ್ ಘೋಷಣೆ ಮಾಡಲಾಗುತ್ತಿದ್ದು, ಪ್ಯಾಕೇಜ್ ಕೂಡ ಘೋಷಣೆ ಮಾಡುವ ಸಾಧ್ಯತೆಯಿದೆ. ಹಾಲು, ತರಕಾರಿ, ದಿನಸಿ ವಸ್ತುಗಳು, ಮೆಡಿಕಲ್ ಶಾಪ್​ಗೆ ಮಾತ್ರ ಅನುಮತಿ ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಉಳಿದಂತೆ ಸಂಪೂರ್ಣ ಬಂದ್ ಆಗಿರಲಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ