Breaking News
Home / ನವದೆಹಲಿ / ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಛೋಟಾ ರಾಜನ್ ಸಾವಿನ ಸುದ್ದಿ ಸುಳ್ಳು ಎಂದ ಏಮ್ಸ್ ಆಸ್ಪತ್ರೆ

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಛೋಟಾ ರಾಜನ್ ಸಾವಿನ ಸುದ್ದಿ ಸುಳ್ಳು ಎಂದ ಏಮ್ಸ್ ಆಸ್ಪತ್ರೆ

Spread the love

ನವದೆಹಲಿ: ಭೂಗತ ಪಾತಕಿಯಾಗಿದ್ದ ಛೋಟಾ ರಾಜನ್ (62) ಕೋವಿಡ್​ ಸೋಂಕಿನಿಂದ ಶುಕ್ರವಾರ ಮೃತಪಟ್ಟಿದ್ದಾನೆ ಎಂಬ ಸುದ್ದಿಗಳನ್ನು ನವದೆಹಲಿಯ ಏಮ್ಸ್​ ಆಸ್ಪತ್ರೆ ಅಲ್ಲಗಳೆದಿದೆ.

ರಾಜನ್​ ಇನ್ನೂ ಬದುಕಿದ್ದಾನೆ. ಅವನಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಏಮ್ಸ್​ ಮೂಲಗಳು ಖಚಿತಪಡಿಸಿರುವುದಾಗಿ ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ರಾಜನ್ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆ ನಡೆದು ಆತನ ಇನ್ನಿಲ್ಲ ಎಂಬ ಸಂದೇಶಗಳು ಹರಿದಾಡಿದ್ದವು.

ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಛೋಟಾ ರಾಜನ್​ನ್ನು ಮುಂಬೈ ಪೊಲೀಸರು 2015 ರಲ್ಲಿ ಇಂಡೊನೇಷಿಯಾದಲ್ಲಿ ಬಂಧಿಸಿ ಭಾರತಕ್ಕೆ ಕರೆ ತಂದಿದ್ದರು. ಆತನ ಮೇಲೆ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಸುಲಿಗೆ, ಬೆದರಿಕೆ, ಹತ್ಯೆಯತ್ನ ಪ್ರಕರಣಗಳು ದಾಖಲಾಗಿದ್ದವು.

ಪತ್ರಕರ್ತ ಜೋತಿರ್ಮಯ್ ಡೇ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಭೀತಾಗಿದ್ದರಿಂದ 2018 ರಲ್ಲಿ ಛೋಟಾ ರಾಜನ್​​ಗೆ ಮೊಕಾ ಕಾಯ್ದೆ ಅಡಿ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ನಂತರ ದೆಹಲಿಯ ತಿಹಾರ್ ಜೈಲಿನಲ್ಲಿ ಆತನನ್ನು ಇರಿಸಲಾಗಿತ್ತು.

ಇತ್ತೀಚೆಗೆ ಕೆಲ ದಿನಗಳ ಹಿಂದೆ ಕೋವಿಡ್​ ಸೋಂಕಿಗೆ ತುತ್ತಾಗಿರುವ ರಾಜನ್ ಅನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ