Breaking News

ತರಕಾರಿ ಅಂಗಡಿಯನ್ನು ಕಾಲಿನಿಂದ ಒದ್ದು ದರ್ಪ ಮೆರೆದ ಪೊಲೀಸ್ ಅಧಿಕಾರಿ : ಅಮಾನತು

Spread the love

ನವದೆಹಲಿ : ಪಂಜಾಬಿನ ಫಗ್ವಾರ ಪ್ರದೇಶದ ಪೊಲೀಸ್ ಅಧಿಕಾರಿಯೊಬ್ಬ ತರಕಾರಿ ಮಾರಾಟ ಮಳಿಗೆಯನ್ನು ಕಾಲಿನಿಂದ ಜಾಡಿಸಿರುವ ಘಟನೆ ನಡೆದಿದ್ದು, ಆ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಫಗ್ವಾರ್ ಸ್ಟೇಷನ್ ಹೌಸ್ ಆಫೀಸರ್ ನವದೀಪ್ ಸಿಂಗ್ ತರಕಾರಿ ಅಂಗಡಿಯನ್ನು ಕಾಲಿನಿಂದ ಜಾಡಿಸಿ ದರ್ಪ ತೋರಿರುವ ಅಧಿಕಾರಿ. ಪೊಲೀಸ್ ಅಧಿಕಾರಿಯ ಈ ದರ್ಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಚರ್ಚೆಗೆ ಕಾರಣವಾಗಿದೆ.

ಇನ್ನು ನವದೀಪ್ ಸಿಂಗ್ ಮೇಲೆ ಕಠಿಣ ಕ್ರಮ ಕೈಗೊಂಡಿರುವ ಪಂಜಾಬ್ ಪೊಲೀಸ್ ಡೈರೆಕ್ಟರ್ ಜನರಲ್ ದಿನಕರ್ ಗುಪ್ತ, ನವದೀಪ್ ಅವರನ್ನು ಅಮಾನತು ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ನಾಚಿಕೆಗೇಡು, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾನು ಫಗ್ವಾರಾ ಎಸ್‌ ಎಚ್‌ ಒ ಅವರನ್ನು ಅಮಾನತುಗೊಳಿಸಿದ್ದೇನೆ. ಅಂತಹ ಅಧಿಕಾರ ದುರುಪಯೋಗವನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಪಂಜಾಬ್ ನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದು, ಈ ವೇಳೆ ಗಸ್ತು ತಿರುಗುತ್ತಿದ್ದ ಅಧಿಕಾರಿ ನವದೀಪ್ ತರಕಾರಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಅಂಗಡಿಯನ್ನು ಜಾಡಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಪೊಲೀಸ್ ಅಧಿಕಾರಿಯ ಮೇಲೆ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ