ಬೆಂಗಳೂರು: ಕೊರೊನಾ ಬಿಕ್ಕಟ್ಟು ಕೆಲ ಖದೀಮರ ಪಾಲಿಗೆ ಬಂಡವಾಳವಾಗಿ ಬಿಟ್ಟಿದ್ದೆ. ರಾಜ್ಯದಲ್ಲಿ ಬೆಡ್ ಹಾಗೂ ರೆಮಿಡಿಸಿವರ್ನ್ನ ಕಾಳಸಂತೆಯಲ್ಲಿ ಮಾರಿದ್ದಾಯ್ತು. ಇದೀಗ ಪ್ರಾಣವಾಯುವಿನ ಮೇಲೆ ಖದೀಮರ ಕಣ್ಣು ಬಿದ್ದಿದೆ.
ನಗರದಲ್ಲಿ ದುಬಾರಿ ಬೆಲೆಗೆ ಆಕ್ಷಿಜನ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರವಿಕುಮಾರ್ ಬಂಧಿತ ಆರೋಪಿ
ಖಾಸಗಿ ಗ್ಯಾಸ್ ಏಜೆನ್ಸಿಯಲ್ಲಿ ಬ್ರಾಂಚ್ ಇನ್ಚಾರ್ಜ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಆಕ್ಸಿಜನ್ನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. 47ಲೀಟರ್ ಆಕ್ಸಿಜನ್ಗೆ ಸರ್ಕಾರ 300ರೂಪಾಯಿ ನಿಗದಿ ಮಾಡಿದೆ. ಆದರೆ ಆರೋಪಿ 3,000 ರೂಪಾಯಿಗೆ ಮಾರಾಟ ಮಾಡುತ್ತಿದ್ದು, ಸಿಸಿಬಿ ಕಾರ್ಯಾಚರಣೆ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಸದ್ಯ ರವಿಕುಮಾರ್ನನ್ನ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಆರೋಪಿ ವಿರುದ್ಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.