Breaking News

ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲಿ ಪ್ರಾಣಬಿಟ್ಟ ಪೇಂಟರ್!

Spread the love

ಮೈಸೂರು: ಏಣಿಯಿಂದ ಬಿದ್ದು ಗಾಯಗೊಂಡಿದ್ದ ಪೇಂಟರ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲಿ ಮೃತಪಟ್ಟ ದಾರುಣ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.

ಕೆ.ಆರ್. ನಗರ ತಾಲೂಕಿನ ಮಿರ್ಲೆ ಗ್ರಾಮದ ನಿವಾಸಿ ಶ್ರೀಕಾಂತ್ (34) ಮೃತ ದುರ್ದೈವಿ

ಮನೆಗೆ ಬಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದ ಶ್ರೀಕಾಂತ್ ಬೆಳಗೊಳದ ಬಳಿ ಮನೆಗೆ ಬಣ್ಣ ಹೊಡೆಯುವಾಗ ಏಣಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಕೈ ಸೇರಿ ದೇಹದ ಹಲವು ಕಡೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೈಸೂರಿನ ಆಸ್ಪತ್ರೆಗೆ ಸೇರಿಸಲು ಆಟೋದಲ್ಲಿ ಕರೆ ತರಲಾಗಿತ್ತು. ಆದರೆ ಸಾಕಷ್ಟು ಆಸ್ಪತ್ರೆಗಳಿಗೆ ಅಲೆದಾಡಿದರೂ ಬೆಡ್ ಸಿಗದೇ ಶ್ರೀಕಾಂತ್ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

Spread the loveತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ