Breaking News
Home / ರಾಜಕೀಯ / ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಾನು ಮತ್ತು ನನ್ನ ತಂದೆ ಮೇಲೆ ದರ್ಪ ಮೆರೆದಿದ್ದಾರೆ ಎಂದು ಆರೋಪಿ

ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಾನು ಮತ್ತು ನನ್ನ ತಂದೆ ಮೇಲೆ ದರ್ಪ ಮೆರೆದಿದ್ದಾರೆ ಎಂದು ಆರೋಪಿ

Spread the love

ನಂಜನಗೂಡು: ತಂದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಾಪಸ್‌ ಕರೆದುಕೊಂಡು ಬರುತ್ತಿದ್ದಾಗ, ಕೋವಿಡ್‌ ನಿಯಮದ ಹೆಸರಿನಲ್ಲಿ ವ್ಯಕ್ತಿಯೊಂದಿಗೆ ಪೊಲೀಸರು ಅಟ್ಟಹಾಸ ಮೆರೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಚಂದ್ರಶೇಖರಯ್ಯ ಎಂಬವರು ಪೊಲೀಸರಿಂದ ನಿಂದನೆಗೆ ಒಳಗಾದ ವ್ಯಕ್ತಿ. ಬಿಪಿ, ಶುಗರ್‌ ರೋಗಿ ತಂದೆಯನ್ನು ಎಂದಿನಂತೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಹುಲ್ಲಹಳ್ಳಿ ರಸ್ತೆ ಬಳಿ ಆದರ್ಶ ಶಾಲೆ ಬಳಿ ಚಂದ್ರಶೇಖರಯ್ಯ ವಾಪಸ್‌ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಪೊಲೀಸರು ಬೈಕ್‌ ತಡೆದು ತಪಾಸಣೆ ನಡೆಸಿದ್ದಾರೆ.

ಕೋವಿಡ್‌ ನಿಯಮದ ಹೆಸರಿನಲ್ಲಿ ಅಟ್ಟಹಾಸ ಮೆರೆದಿದ್ದಾರೆ ಎನ್ನಲಾಗಿದೆ. ಈ ವೇಳೆ ರೋಗಿ ಸುಸ್ತಾಗಿ ರಸ್ತೆಯಲ್ಲಿ ನರಳಾಡಿರುವ ವಿಡಿಯೋ ವೈರಲ್‌ ಆಗಿದೆ. ತಂದೆಯನ್ನು ಕರೆತಂದಿದ್ದ ವ್ಯಕ್ತಿ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ. ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಾನು ಮತ್ತು ನನ್ನ ತಂದೆ ಮೇಲೆ ದರ್ಪ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ