Breaking News
Home / Uncategorized / ಇಂದಿನಿಂದ ಕಟ್ಟುನಿಟ್ಟಿನ ಲಾಕ್‍ಡೌನ್

ಇಂದಿನಿಂದ ಕಟ್ಟುನಿಟ್ಟಿನ ಲಾಕ್‍ಡೌನ್

Spread the love

ಕೊರೊನಾ ಸೋಂಕು ಹರಡುವಿಕೆ ತಡೆಗೆ ರಾಜ್ಯ ಸರ್ಕಾರ ಮೇ 10ರಿಂದ 24ರ ವರೆಗೆ ಘೋಷಿಸಿರುವ ಲಾಕ್‍ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾ ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಜಿಲ್ಲಾ ದಂಡಾಧಿಕಾರಿ ರಾಮಚಂದ್ರನ್ ಆರ್ ಅವರು ಈಗಾಗಲೇ ಜಿಲ್ಲೆಯಾದ್ಯಂತ ಸಿಆರ್‌ಪಿಸಿ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅನಗತ್ಯವಾಗಿ ಓಡಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ನಿಯಮ ಉಲ್ಲಂಘಿಸಿ ರಸ್ತೆಗಿಳಿಸಿದರೆ ವಾಹನಗಳನ್ನೂ ವಶಕ್ಕೆ ತೆಗೆದುಕೊಳ್ಳಲಿದ್ದಾರೆ.

ಅನಗತ್ಯ ಸಂಚರಿಸುವಂತಿಲ್ಲ: ‘ಲಾಕ್‍ಡೌನ್ ಅವಧಿಯಲ್ಲಿ ವಿಶೇಷ ರಿಯಾಯಿತಿ ನೀಡಲಾದ ಕರ್ತವ್ಯಗಳನ್ನು ಹೊರತುಪಡಿಸಿ ಬೇರಾವ ಕಾರಣಕ್ಕೂ ಸಾರ್ವಜನಿಕರು ಅನಗತ್ಯವಾಗಿ ಸಂಚರಿಸುವುದು, ಮನೆಯಿಂದ ಹೊರಗೆ ಬರುವುದು ಮಾಡುವಂತಿಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ತಿಳಿಸಿದ್ದಾರೆ.

‘ಅಂತರರಾಜ್ಯ, ಅಂತರ ಜಿಲ್ಲಾ ಗಡಿ ರಸ್ತೆಗಳನ್ನು ಬಂದ್ ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಅಂತರರಾಜ್ಯ ಅಥವಾ ಅಂತರ ಜಿಲ್ಲಾ ಸಂಚಾರಕ್ಕೆ ಅವಕಾಶ ಇಲ್ಲ. ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರುತ್ತದೆ’ ಎಂದು ಹೇಳಿದ್ದಾರೆ.

‘ಪ್ರತಿದಿನ ಬೆಳಿಗ್ಗೆ 6ರಿಂದ 10ರ ವರೆಗೆ ಅಗತ್ಯ ವಸ್ತುಗಳಿಗೆ ಸಂಬಂಧಿಸಿದ ಅಂಗಡಿಗಳು ತೆರೆದಿರಲಿವೆ. ಅಗತ್ಯ ವಸ್ತುಗಳ ಖರೀದಿಗೆ ಹೋಗುವವರು ಕಾಲ್ನಡಿಗೆಯಲ್ಲೇ ಹೋಗಬೇಕು. ವಾಹನದಲ್ಲಿ ತೆರಳಿದರೆ ವಾಹನ ವಶಕ್ಕೆ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಸಿದ್ದಾರೆ.

‘ಅಗತ್ಯ ಸೇವೆ ಒದಗಿಸುವ ಅಧಿಕಾರಿ, ಸಿಬ್ಬಂದಿ(ಕಂದಾಯ ಇಲಾಖೆ, ದೂರ ಸಂಪರ್ಕ ನೌಕರರು,
ಕೇಬಲ್ ಆಪರೇಟರ್, ಮೆಡಿಕಲ್, ಕೋರಿಯರ್, ಹೊಟೇಲ್ ಮಾಲೀಕರು, ಸಿಬ್ಬಂದಿ)ಗೆ ಯಾವುದೇ ವಿಶೇಷ ಗುರುತಿನ ಚೀಟಿ ನೀಡಲಾಗಿಲ್ಲ.
ಆದರೆ, ಅವರು ಮೇಲಧಿಕಾರಿಗಳು ಹಾಗೂ ಮಾಲೀಕರು ನೀಡುವ ಗುರುತಿನ ಚೀಟಿ ಬಳಸಬಹುದು’ ಎಂದು ಹೇಳಿದ್ದಾರೆ.

‘ಖಾಸಗಿ ಔಷಧ ಕಾರ್ಖಾನೆಗಳನ್ನು ನಡೆಸಲು ಅನುಮತಿ ಇದ್ದು, ಕಾರ್ಖಾನೆಯವರು ತಮ್ಮ ಕಾರ್ಮಿಕರಿಗೆ ವಿಶೇಷ ಬಸ್ ಅಥವಾ ವಾಹನಗಳ ವ್ಯವಸ್ಥೆ ಮಾಡಿ, ಅದರಲ್ಲೇ ಸಂಚರಿಸಬೇಕು. ಆಟೊ, ಟ್ಯಾಕ್ಸಿಗಳಿಗೆ ಆಸ್ಪತ್ರೆಗೆ ರೋಗಿಗಳು ಹಾಗೂ ಜನರಿಗೆ ಒಯ್ಯಲು ಮಾತ್ರ ಅನುಮತಿ ಕೊಡಲಾಗುವುದು’ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

Spread the love ವಿಜಯಪುರ: ಯಾವುದೇ ಕಾರಣಕ್ಕೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ ಎಂದು ಸಾರಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ