Breaking News
Home / ಜಿಲ್ಲೆ / ಬೆಂಗಳೂರು / ಬಡವರಿಗೆ ಉಚಿತ ದಿನಸಿ ವಿತರಿಸಿ, ಟೋಟಲ್​ ಲಾಕ್​ಡೌನ್​ಗೆ ಒತ್ತಾಯಿಸಿದ ಸಿದ್ದರಾಮಯ್ಯ

ಬಡವರಿಗೆ ಉಚಿತ ದಿನಸಿ ವಿತರಿಸಿ, ಟೋಟಲ್​ ಲಾಕ್​ಡೌನ್​ಗೆ ಒತ್ತಾಯಿಸಿದ ಸಿದ್ದರಾಮಯ್ಯ

Spread the love

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಕೊರೊನಾ ಎರಡನೇ ಅಲೆಯನ್ನ ನಿಯಂತ್ರಣಕ್ಕೆ ತರಲು ಲಾಕ್​ಡೌನ್ ವಿಧಿಸಲಾಗಿದೆ. ಈ ಹಿನ್ನಲೆ ಇಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪುಲಿಕೇಶಿನಗರದ ಬಡ ಜನರಿಗೆ ಉಚಿತ ದಿನಸಿ ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಿನಸಿ ಸಾಮಗ್ರಿಗಳನ್ನ ಹಂಚಿದರು. ಈ ವೇಳೆ ಮಾಜಿ ಸಚಿವ ಕೃಷ್ಣ ಭೈರೇಗೌಡ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಡವರಿಗೆ ಉಚಿತ ದಿನಸಿ ಕೊಡ್ತಿದ್ದಾರೆ. ಲಾಕ್​ಡೌನ್​​ ಇರೋದ್ರಿಂದ ಬಡವರು ಹಸಿವಿನಿಂದ ಇರಬಾರದು ಅಂತ ಉಚಿತ ದಿನಸಿ ಕೊಡ್ತಿದ್ದಾರೆ. ಮನೆಮನೆಗೇ ಉಚಿತ ದಿನಸಿ ಕಳಿಸ್ತಿದ್ದಾರೆ ಎಂದರು. ಇನ್ನು ರಾಜ್ಯದಲ್ಲಿ ಟೋಟಲ್ ಲಾಕ್​ಡೌನ್ ಮಾಡಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ರು. ಸೋಂಕಿತರ ಸಂಖ್ಯೆ ಪ್ರತಿನಿತ್ಯ 50 ಸಾವಿರದ ಆಸುಪಾಸಿನಲ್ಲಿದೆ. ಹೀಗಾಗಿ ಟೋಟಲ್ ಎರಡು ವಾರಗಳ ಕಾಲ ಟೋಟಲ್ ಲಾಕ್​ಡೌನ್ ಮಾಡಬೇಕು. ಅದರಿಂದ ಕೊರೊನಾ ಸರಪಳಿ ತುಂಡರಿಸಬಹುದು. ನನ್ನ ಅಭಿಪ್ರಾಯದ ಪ್ರಕಾರ ಸೋಂಕಿತರ ಸಂಖ್ಯೆ ಕಡಿಮೆ ಆಗಬೇಕು ಅಂದರೆ ಟೋಟಲ್ ಲಾಕ್​ಡೌನ್ ಮಾಡಲೇಬೇಕು ಎಂದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ