Breaking News

ವೆಂಟಿಲೇಟರ್ ಸಿಗದೇ ಮುಂಡರಗಿಯಲ್ಲಿ ಮೂವರು ಸಾವು

Spread the love

ಮುಂಡರಗಿ (ಗದಗ): ಜಿಲ್ಲೆಯಲ್ಲಿ ವೆಂಟಿಲೇಟರ್ ಸಮಸ್ಯೆ ಉಲ್ಭಣಿಸಿದೆ. ವೆಂಟಿಲೇಟರ್ ಸಿಗದೇ ಮೂವರು ಕೋವಿಡ್ ಸೋಂಕಿತರು ಮೃತಪಟ್ಟಿರುವ ಘಟನೆ ಪಟ್ಟಣದ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ.

ತಾಲೂಕಿನ ಬೂದಿಹಾಳ ಗ್ರಾಮದ ಕನಕಪ್ಪ ತಳವಾರ (87 ವ), ಬಿದರಹಳ್ಳಿಯ ಕಸ್ತೂರೆವ್ವ ವಿ.ಪುತ್ತೂರು ಹಾಗೂ ಕೊಪ್ಪಳ ಜಿಲ್ಲೆಯ ಭೈರಾಪುರ ಗ್ರಾಮದ ನೀಲಮ್ಮ ಮೇಟಿ (48 ವ) ಮೃತಪಟ್ಟಿದ್ದಾರೆ.

ಕೋವಿಡ್ ಸೋಂಕಿತರು ಮುಂಡರಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕಿತರಿಗೆ ರವಿವಾರ ಸಂಜೆಯಿಂದ ಉಸಿರಾಟದಲ್ಲಿ ತೀವ್ರ ತೊಂದರೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವೆಂಟಿಲೇಟರ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಲಾಯಿತು. ಆದರೆ, ಜಿಲ್ಲಾ ಆಸ್ಪತ್ರೆ ಆವರಣಲ್ಲಿರುವ ನಿಗದಿತ ಕೋವಿಡ್ ಆಸ್ಪತ್ರೆಯಲ್ಲೂ ವೆಂಟಿಲೇಟರ್ ಬೆಡ್ ಸಿಕ್ಕಿರಲಿಲ್ಲ.

ತೀವ್ರ ಉಸಿರಾಟದ ತೊಂದರೆಯಿಂದ ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದ ಸೋಂಕಿತರು, ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|ಕೀರ್ತಿಹಾಸ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ