ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯುವ ನಿರೀಕ್ಷೆಯಲ್ಲಿದ್ದ 18 ವರ್ಷ ಮೇಲ್ಪಟ್ಟವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಮೇ. 10 ರಿಂದ 24 ರವರೆಗೆ ಕಠಿಣ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಿಗೆ ಲಸಿಕೆ ಪಡೆಯಲು ಬರಲು ಸಮಸ್ಯೆ ಅಗುತ್ತದೆ ಹೀಗಾಗಿ 14 ದಿನ ಮುಂದೂಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಅವರು, ಬೆಂಗಳುರು ಸೇರಿದಂತೆ ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ರಾಜ್ಯಕ್ಕೆ 5 ಲಕ್ಷ ಡೋಸ್ ಬಂದಿದೆ. ಯುವಕರಿಗೆ ನೀಡಲು ಯಾವುದೇ ಸಮಸ್ಯೆ ಇಲ್ಲ,ಇಂದಿನಿಂದ ಹಲವು ನಿರ್ಬಂಧಗಳಿವೆ ಹೀಗಾಗಿ ಸಮಸ್ಯೆ ಎದುರಾಗಿದ್ದು, ಆಸ್ಪತ್ರೆಗಳಿಗೆ ಲಸಿಕೆ ಪಡೆಯಲು ಬರಲು ಸಮಸ್ಯೆ ಆಗುತ್ತೆ. ಹೀಗಾಗಿ 14 ದಿನ ಮುಂದೂಡುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ. 10 ರ ಇಂದಿನಿಂದ ಮೇ. 24 ರವರೆಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಕಠಿಣ ಲಾಕ್ ಡೌನ್ ಜಾರಿಗೊಳಿಸಲಾಗಿದೆ.