ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪ್ರಸಕ್ತ ಸಾಲಿನ ಸಮ ಸೆಮಿಸ್ಟರ್ ತರಗತಿಗಳಿಗೆ ಬೋಧಿಸಲು ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಹಿಂದೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಆದ್ಯತೆ ನೀಡಿ ಅಥವಾ ಹೊಸ ಅಭ್ಯರ್ಥಿಗಳಿಂದ ಅರ್ಜಿ ಪಡೆದು ಕಾಲೇಜು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ವಿಭಾಗ ಮುಖ್ಯಸ್ಥರುಉ ಹಿರಿಯ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಸದಸ್ಯರನ್ನು ಒಳಗೊಂಡ ಸಮಿತಿಯು ಅರ್ಜಿ ಪರಿಶೀಲಿಸಿ ಆಯ್ಕೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಲಾಗಿದೆ.
ಈ ಹಿಂದೆ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ದಾಖಲೆ ಆಧಾರದಲ್ಲಿ ಮೆರಿಟ್ ಅನ್ವಯ ನೇಮಕಾತಿ ನಡೆಸಬೇಕೆಂದು ನಿರ್ದೇಶಿಸಲಾಗಿದೆ. ಆಯಾ ಕಾಲೇಜುಗಳ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರ ಹುದ್ದೆ ಹಂಚಿಕೆ ಮಾಡಲಾಗಿದೆ.