Breaking News

ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತ ಆಹಾರ ಪೂರೈಕೆಗೆ ರಾಜ್ಯ ಸರ್ಕಾರದಿಂದ ಸೂಚನೆ

Spread the love

ರಾಜ್ಯದಲ್ಲಿ ಕೊರೊನಾ 2ನೇ ನಿಯಂತ್ರಣದ ಹಿನ್ನೆಲೆಯಲ್ಲಿ ಮೇ 24ರವರೆಗೂ ರಾಜ್ಯ ಸರ್ಕಾರ ಲಾಕ್​ಡೌನ್​ ಆದೇಶ ವಿಧಿಸಿದೆ. ಈ ಸಮಯದಲ್ಲಿ ಯಾರೂ ಉಪವಾಸದಿಂದ ಇರಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್​ನಲ್ಲಿ ಸಾರ್ವಜನಿಕರಿಗೆ ಉಚಿತ ಆಹಾರ ಒದಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ರಾಜ್ಯದಲ್ಲಿ ಮೇ 10ರಿಂದ ಮೇ 24ನೇ ತಾರೀಖಿನಿವರೆಗೆ ಲಾಕ್​ಡೌನ್​ ಆದೇಶ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟವನ್ನ ಎದುರಿಸುವ ದಿನಗೂಲಿ ಕಾರ್ಮಿಕರು ಸೇರಿದಂತೆ ಬಡತನ ರೇಖೆಯ ಕೆಳಗಿರುವ ಯಾರೂ ಸಹ ಉಪವಾಸದಿಂದ ಇರಬಾರದು. ಹೀಗಾಗಿ ಇಂದಿರಾ ಕ್ಯಾಂಟೀನ್​ನಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನ ಉಚಿತವಾಗಿ ನೀಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅನ್ವಯವಾಗುವಂತೆ ಸುತ್ತೋಲೆಯನ್ನ ಪ್ರಕಟಿಸಲಾಗಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ