Breaking News

ಬೆಳಗಾವಿಯಲ್ಲಿ  ಶಿವಸೇನೆ – ಎಂಇಎಸ್ ಇದೀಗ ಕೊರೋನಾ ಸೋಂಕಿತರಿಗಾಗಿ ಆಕ್ಸಿಜನ್ ಪೂರೈಕೆ ಆರಂಭ

Spread the love

ಬೆಳಗಾವಿ – ಬೆಳಗಾವಿಯಲ್ಲಿ  ಶಿವಸೇನೆ – ಎಂಇಎಸ್ ಇದೀಗ ಮರಾಠಾ ಭಾಷಿಕ ಕೊರೋನಾ ಸೋಂಕಿತರಿಗಾಗಿ ಆಕ್ಸಿಜನ್ ಪೂರೈಕೆ ಆರಂಭಿಸಿದೆ.

ಮಹಾರಾಷ್ಟ್ರ ಗಡಿ ಸಮನ್ವಯ ಸಚಿವ ಏಕನಾಥ ಶಿಂಧೆ ಬೆಳಗಾವಿ ಮರಾಠಿಗರಿಗಾಗಿ 2 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಪೂರೈಸಿದ್ದು, ಇನ್ನೂ 8 ಪೂರೈಸುವುದಾಗಿ ತಿಳಿಸಿದ್ದಾರೆ ಎಂದು ಎಂಇಎಸ್ ಮುಖಂಡ ಶುಭಂ ಶೇಳಕೆ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲಾಡಳಿತ ಇಲ್ಲಿಯ ಎನ್ ಜಿ ಓ ಗಳಿಗೆ  ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಿದ್ದರಿಂದ ಸಮಸ್ಯೆಯಾಗಿದೆ. ಹಾಗಾಗಿ ಮಹಾರಾಷ್ಟ್ರದ ನೆರವು ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಶುಭಂ ಶೇಳಕೆ ಕಳೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸಿ 1.24 ಲಕ್ಷದಷ್ಟು ಮತಗಳನ್ನು ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬರಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮೇಲೆ ಶಿವಸೇನೆ – ಎಂಇಎಸ್ ಮೈತ್ರಿಕೂಟ ಕಣ್ಣಿಟ್ಟಿದೆ. ಹಾಗಾಗಿ ಇದೀಗ ಮರಾಠಿ ಭಾಷಿಕರಿಗೆ ಆಕ್ಸಿಜನ್ ಪೂರೈಸುವ ಮೂಲಕ ಅನುಕಂಪ ಗಿಟ್ಟಿಸಲು ಮುಂದಾಗಿದೆ.

ಈಗಾಗಲೆ ಮರಾಠಿ ಭಾಷಿಕರು ಹೆಚ್ಚಾಗಿರುವ ಖಾಸಗಿ ಕೊರೋನಾ ಕೇರ್ ಸೆಂಟರ್ ಗಳಲ್ಲಿ ಆಕ್ಸಿಜನ್ ಪೂರೈಸಲು ನಿರ್ಧರಿಸಿದೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ