Breaking News

ಕೊರೊನಾ ಸೋಂಕಿತೆ ಶವವನ್ನ ನಡುಬೀದಿಯಲ್ಲಿ ಬಿಟ್ಟ ಆರೋಗ್ಯ ಸಿಬ್ಬಂದಿ..!

Spread the love

ಕೋವಿಡ್​ ಸೋಂಕಿನಿಂದ ಮೃತಪಟ್ಟ ಮಹಿಳೆಯ ಶವವನ್ನ ಆರೋಗ್ಯ ಸಿಬ್ಬಂದಿ ಮರದಡಿಯಲ್ಲೇ ಬಿಟ್ಟು ಹೋದ ಅಮಾನವೀಯ ಘಟನೆ ತುಮಕೂರು ಜಿಲ್ಲೆ ಪಾವಗಡದ ಮರಡಿಪಾಳ್ಯದಲ್ಲಿ ನಡೆದಿದೆ.

ಕಳೆದ ಕೆಲ ದಿನಗಳ ಹಿಂದೆ ಕೋವಿಡ್​ ಸೋಂಕಿಗೆ ಒಳಗಾಗಿದ್ದ ಮಹಿಳೆಯನ್ನ ಪಾವಗಡದ ಕ್ವಾರಂಟೈನ್ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಮಹಿಳೆ ಕ್ವಾರಂಟೈನ್​ ಕೇಂದ್ರದಲ್ಲೇ ಸಾವನ್ನಪ್ಪಿದ್ದರು. ಮಹಿಳೆಯ ಮೃತದೇಹವನ್ನ ತೆಗೆದುಕೊಂಡು ಹೋಗಿ ಕೊರೊನಾ ಮಾರ್ಗಸೂಚಿಯಂತೆ ಅಂತ್ಯಕ್ರಿಯೆ ಮಾಡೋದು ಬಿಟ್ಟು ಆರೋಗ್ಯ ಸಿಬ್ಬಂದಿ ಸೋಂಕಿತೆಯ ಶವವನ್ನ ಗ್ರಾಮದ ಒಳಗಿನ ಮರವೊಂದರ ಅಡಿಯಲ್ಲಿ ಇಟ್ಟು ಹೋಗಿದ್ದಾರೆ.

ಕುಟುಂಬಸ್ಥರ ಮನವಿ ಬಳಿಕವೂ ಶವದ ಅಂತ್ಯಕ್ರಿಯೆ ಮಾಡಲು ಆರೋಗ್ಯ ಸಿಬ್ಬಂದಿ ನಿರಾಕರಿಸಿದ್ದರು ಎನ್ನಲಾಗಿದೆ. ಬಳಿಕ ಮೃತ ಮಹಿಳೆಯ ಕುಟುಂಬಸ್ಥರೇ ಪಿಪಿಇ ಕಿಟ್​ ಧರಿಸಿ ಅಂತ್ಯಕ್ರಿಯೆ ಮಾಡಿದ್ದಾರೆ. ಆರೋಗ್ಯ ಸಿಬ್ಬಂದಿ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗ್ತಿದೆ.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ