Breaking News
Home / ಜಿಲ್ಲೆ / ರಾಯಚೂರು / ಮಂಗಳವಾರದಿಂದ ಲಾಠಿ ಏಟಿನ ಬದಲಾಗಿ, ಅನಗತ್ಯ ಸಂಚಾರಿಗಳಿಗೆ ದಂಡ ವಿಧಿಸುವುದು ಮತ್ತು ವಾಹನಗಳನ್ನು ವಶಕ್ಕೆ ಪಡೆಯುವುದನ್ನು ವ್ಯಾಪಕ

ಮಂಗಳವಾರದಿಂದ ಲಾಠಿ ಏಟಿನ ಬದಲಾಗಿ, ಅನಗತ್ಯ ಸಂಚಾರಿಗಳಿಗೆ ದಂಡ ವಿಧಿಸುವುದು ಮತ್ತು ವಾಹನಗಳನ್ನು ವಶಕ್ಕೆ ಪಡೆಯುವುದನ್ನು ವ್ಯಾಪಕ

Spread the love

ರಾಯಚೂರು: ಲಾಕ್‌ಡೌನ್‌ ಜಾರಿ ಬಿಗಿಗೊಳಿಸಿರುವ ಪೊಲೀಸರು ಮಂಗಳವಾರದಿಂದ ಲಾಠಿ ಏಟಿನ ಬದಲಾಗಿ, ಅನಗತ್ಯ ಸಂಚಾರಿಗಳಿಗೆ ದಂಡ ವಿಧಿಸುವುದು ಮತ್ತು ವಾಹನಗಳನ್ನು ವಶಕ್ಕೆ ಪಡೆಯುವುದನ್ನು ವ್ಯಾಪಕಗೊಳಿಸಿದ್ದಾರೆ.

ಕೋವಿಡ್‌-19 ಎರಡನೇ ಅಲೆ ನಿಯಂತ್ರಣ ಕ್ರಮಗಳ ಜಾರಿಯು ಜನವರಿ 1 ರಿಂದ ಆರಂಭವಾಗಿದ್ದು, ಮೇ 10 ರವರೆಗೂ ಒಟ್ಟು 4,322 ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮೇ 10 ರಂದು ಒಂದೇ ದಿನ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರ ವಿರುದ್ಧ 699 ಪ್ರಕರಣಗಳು , ಸಾಮಾಜಿಕ ಅಂತರ ಉಲ್ಲಂಘನೆ 4 ಪ್ರಕರಣಗಳನ್ನು ದಾಖಲಿಸಿ ಒಟ್ಟು ₹70,300 ದಂಡ ವಿಧಿಸಲಾಗಿದೆ. ಕರ್ನಾಟಕ ಮಹಾಮಾರಿ ಕಾಯ್ದೆ ಅಡಿಯಲ್ಲಿ 4 ಪ್ರಕರಣಗಳನ್ನು ದಾಖಲಿಸಿ ಅನಗತ್ಯ ಸಂಚರಿಸಿದ 643 ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಅನವಶ್ಯಕವಾಗಿ ಸಂಚರಿಸುವ ವಾಹನಗಳನ್ನು ಜಪ್ತ ಮಾಡಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಿಸಲು ತೀರ್ಮಾನಿಸಲಾಗಿದೆ. ಜಪ್ತಿ ಮಾಡಿದ ವಾಹನವನ್ನು ನ್ಯಾಯಾಲಯ ಮುಖಾಂತರ ಬಿಡುಗಡೆ ಮಾಡಿಕೊಳ್ಳಬೇಕಾಗುವುದಲ್ಲದೇ , ಸಾರ್ವಜನಿಕರ ವಿರುದ್ಧ ದಾಖಲಾದ ಪ್ರಕರಣವು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು , ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕಾತ್ತದೆ. ಸಾರ್ವಜನಿಕರು ಜಾಗೃತಿ ವಹಿಸಲು ಮತ್ತು ಕೋವಿಡ್ -19 ನಿಯಂತ್ರಣ ಕುರಿತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜನವರಿ 1 ರಿಂದ ಏಪ್ರಿಲ್‌ 21 ರ ಅವಧಿಯಲ್ಲಿ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರ ವಿರುದ್ಧ 7541 ಪ್ರಕರಣಗಳನ್ನು ದಾಖಲಿಸಿ ₹8,64,950 ದಂಡ ವಿಧಿಸಲಾಗಿತ್ತು. ಏಪ್ರಿಲ್‌ 22 ರಿಂದ ಮೇ 9 ಜನತಾ ಕರ್ಫ್ಯೂ ಅವಧಿಯಲ್ಲಿ ಮಾಸ್ಕ್ ಧರಿಸದೇ ಇರುವ ಸಾರ್ವಜನಿಕರ ವಿರುದ್ಧ 8,004 ಪ್ರಕರಣಗಳನ್ನು ದಾಖಲಿಸಿ ₹8,24,250 ದಂಡ ವಿಧಿಸಲಾಗಿದೆ. ಅನಾವಶ್ಯಕವಾಗಿ ಸಂಚರಿಸಿದ ವಾಹನ ಸವಾರರ 3,200 – ದ್ವಿಚಕ್ರ ವಾಹನಗಳು , 351 – ನಾಲ್ಕು ಚಕ್ರ ವಾಹನಗಳು ಮತ್ತು 128 – ಇತರೇ ವಾಹನಗಳು ಸೇರಿ ಒಟ್ಟು 3679 ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಕರ್ನಾಟಕ ಮಹಾಮಾರಿ ಕಾಯ್ದೆ ಅಡಿ 108 ಪ್ರಕರಣಗಳನ್ನು ದಾಖಲಿಸಿದ್ದು , ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ3 ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾಮಾಜಿಕ ಉಲ್ಲಂಘನೆ ಮಾಡಿದ ಸಾರ್ವಜನಿಕರ ವಿರುದ್ಧ 23 ಪ್ರಕರಣಗಳನ್ನು ದಾಖಲಿಸಿದ್ದು, ಕೋವಿಡ್ -19 ನಿಯಮಾವಳಿ ಉಲ್ಲಂಘಿಸಿ ಹೆಚ್ಚಿನ ಪ್ರಮಾಣದಲ್ಲಿ ಒಂದೆಡೆ ಸೇರಿದ ಸಾರ್ವಜನಿಕರ ವಿರುದ್ಧ 23 ಪ್ರಕರಣಗಳನ್ನು ದಾಖಲಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಉಗುಳಿದ ಸಾರ್ವಜನಿಕರ ವಿರುದ್ಧ 610 ಪ್ರಕರಣಗಳನ್ನು ದಾಖಲಿಸಿದ್ದು , ಸಾರ್ವಜನಿಕರ ಸ್ಥಳದಲ್ಲಿ ಮಧ್ಯಪಾನ , ಗುಟಕಾ, ತಂಬಾಕು ಉತ್ಪನ್ನಗಳ ಸೇವನೆ ಮಾಡಿದ ಸಾರ್ವಜನಿಕರ ವಿರುದ್ಧ ಕೋಟ್ಟಾ ಕಾಯ್ದೆ ಅಡಿಯಲ್ಲಿ 608 ಪ್ರಕರಣಗಳನ್ನು ದಾಖಲಿಸಿ ಸ್ಥಳದಲ್ಲಿಯೇ ದಂಡ ವಿಧಿಸಲಾಗಿದೆ.


Spread the love

About Laxminews 24x7

Check Also

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

Spread the love ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ