Breaking News

ಮೈಸೂರು ತಲುಪಿದ ಆಮ್ಲಜನಕ ಟ್ಯಾಂಕ್‌

Spread the love

ಮೈಸೂರು: ಕೇಂದ್ರ ಸರ್ಕಾರವು ಆಮ್ಲಜನಕ ಎಕ್ಸ್‌ಪ್ರೆಸ್‌ನಲ್ಲಿ ಮಂಗಳವಾರ ಬೆಂಗಳೂರಿಗೆ ಸಾಗಿಸಿದ್ದ ಆಮ್ಲಜನಕದ ಒಂದು ಕಂಟೈನರ್‌ ಅನ್ನು (ಟ್ಯಾಂಕ್‌) ಬುಧವಾರ ಬೆಳಿಗ್ಗೆ ಮೈಸೂರಿಗೆ ತರಲಾಯಿತು. ಈ ಕಂಟೈನರ್‌ನಲ್ಲಿ 20 ಸಾವಿರ ಲೀಟರ್ ಆಮ್ಲಜನಕ ತುಂಬಿದೆ.

ಈ ಆಮ್ಲಜನಕವನ್ನು ಸ್ಥಳೀಯವಾಗಿ ಶೇಖರಿಸಿ ಕೂಡಲೇ ಕಂಟೈನರ್‌ ಹಿಂದಿರುಗಿಸಬೇಕಿತ್ತು. ಆದರೆ, ಇಷ್ಟು ಆಮ್ಲಜನಕವನ್ನು ಸಂಗ್ರಹಿಸಲು ಬೇಕಾದ ಶೇಖರಣಾ ಘಟಕ ಮೈಸೂರು ಜಿಲ್ಲೆಯಲ್ಲಿ ಇರಲಿಲ್ಲ. ಹೀಗಾಗಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ವಿಕೋಪ ನಿರ್ವಹಣೆ ಕಾಯ್ದೆ ಪ್ರಯೋಗಿಸಿ ಕಡಕೊಳ ಕೈಗಾರಿಕಾ ಪ್ರದೇಶದ ತ್ರಿನೇತ್ರ ಗ್ಯಾಸಸ್‌ನಲ್ಲಿದ್ದ ಸೌಲಭ್ಯವನ್ನು ಜಿಲ್ಲಾಡಳಿತದ ಸುಪರ್ದಿಗೆ ಪಡೆದಿದ್ದಾರೆ. ಅಲ್ಲದೇ, ಇಲ್ಲಿನ 20ಕೆಎಲ್‌ ಸಾಮರ್ಥ್ಯದ ಆಮ್ಲಜನಕ ಘಟಕದಲ್ಲಿ ಶೇಖರಿಸಲು ವ್ಯವಸ್ಥೆ ಕಲ್ಪಿಸಿದ್ದಾರೆ.


Spread the love

About Laxminews 24x7

Check Also

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ಕಾಯ್ದಿರಿಸಿದ ಹೈಕೋರ್ಟ್​

Spread the loveಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್​ಐಆರ್​ ಪ್ರಶ್ನಿಸಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ