Breaking News

ಚೋಪ್ರಾ ರಚಿಸಿದ ಟೀಮ್‌ ಇಂಡಿಯಾ ತಂಡಕ್ಕೆ ಶಿಖರ್‌ ಧವನ್‌ ನಾಯಕ

Spread the love

ಹೊಸದಿಲ್ಲಿ: ಟೀಮ್‌ ಇಂಡಿಯಾ ಇಂಗ್ಲೆಂಡ್‌ ಪ್ರವಾಸದಲ್ಲಿರುವಾಗಲೇ ಭಾರತದ ಮತ್ತೂಂದು ತಂಡ ಶ್ರೀಲಂಕಾಕ್ಕೆ ತೆರಳಿ ಸೀಮಿತ ಓವರ್‌ಗಳ ಸರಣಿಯನ್ನಾಡುವ ಸುದ್ದಿ ಭಾರೀ ಸಂಚಲನ ಮೂಡಿಸಿದೆ.

ಇದೇ ಸಂದರ್ಭದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಆಕಾಶ್‌ ಚೋಪ್ರಾ 17 ಸದಸ್ಯರ ತಂಡವೊಂದನ್ನು ಶ್ರೀಲಂಕಾ ಪ್ರವಾಸಕ್ಕೆಂದು ರಚಿಸಿದ್ದಾರೆ. ಎಡಗೈ ಆರಂಭಕಾರ ಶಿಖರ್‌ ಧವನ್‌ ಅವರನ್ನು ನಾಯಕನನ್ನಾಗಿ ಆರಿಸಿದ್ದಾರೆ. ಹಾರ್ದಿಕ್‌ ಪಾಂಡ್ಯ ಉಪನಾಯಕರಾಗಿದ್ದಾರೆ.

ಚೋಪ್ರಾ ತಂಡ: ಶಿಖರ್‌ ಧವನ್‌ (ನಾಯಕ), ಪೃಥ್ವಿ ಶಾ, ಶ್ರೇಯಸ್‌ ಅಯ್ಯರ್‌, ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌, ಹಾರ್ದಿಕ್‌ ಪಾಂಡ್ಯ (ಉಪನಾಯಕ), ಕೃಣಾಲ್‌ ಪಾಂಡ್ಯ, ಯಜುವೇಂದ್ರ ಚಹಲ್‌, ದೀಪಕ್‌ ಚಹರ್‌, ಭುವನೇಶ್ವರ್‌ , ನವದೀಪ್‌ ಸೈನಿ, ಟಿ. ನಟರಾಜನ್‌, ರಾಹುಲ್‌ ಚಹರ್‌, ವರುಣ್‌ ಚಕ್ರವರ್ತಿ, ಸಂಜು ಸ್ಯಾಮ್ಸನ್‌, ದೀಪಕ್‌ ಹೂಡಾ, ಪ್ರಸಿದ್ಧ್ ಕೃಷ್ಣ.

ಲಂಕಾ ಪ್ರವಾಸಕ್ಕೆ ಅಯ್ಯರ್‌ ಇಲ್ಲ?
ಮುಂಬಯಿ: ಜುಲೈಯಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್‌ ಶ್ರೇಯಸ್‌ ಅಯ್ಯರ್‌ ಕಾಣಿಸಿಕೊಳ್ಳುವುದು ಅನುಮಾನ. ಆಗ ಅವರು ಭುಜದ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗುವ ಸಾಧ್ಯತೆ ಇಲ್ಲದಿರುವುದೇ ಇದಕ್ಕೆ ಕಾರಣ.

ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮ ಗೈರಲ್ಲಿ ಶ್ರೇಯಸ್‌ ಅಯ್ಯರ್‌ಗೆ ಭಾರತ ತಂಡದ ನಾಯಕತ್ವ ಒಲಿಯುವ ಸಾಧ್ಯತೆ ಇತ್ತು.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ