Breaking News

ಐಸಿಯುಗೆ ಸ್ಥಳಾಂತರಿಸಲು ಕೇಳಿಕೊಂಡ್ರು ಜನರಲ್​ ವಾರ್ಡ್​ನಲ್ಲೇ ಚಿಕಿತ್ಸೆ: ಯುವಕ ಸಾವು

Spread the love

ಚಿಕ್ಕಮಗಳೂರು: ಸರಿಯಾದ ಸಮಯಕ್ಕೆ ವೆಂಟಿಲೇಟರ್​ ಸಿಗದೇ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಮೇಘರಾಜ್(31) ಮೃತ ಯುವಕ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದ ನಿವಾಸಿ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯ ಜನರಲ್ ವಾರ್ಡ್​ನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದರಿಂದ ಐಸಿಯುಗೆ ಶಿಫ್ಟ್ ಮಾಡುವಂತೆ ಯುವಕ ಕೇಳಿಕೊಂಡಿದ್ದ.

ಆದರೆ, ಯುವಕನ ಮನವಿಯನ್ನು ಪುರಷ್ಕರಿಸಿದೇ ಕೊನೆಯ ಕ್ಷಣದವರೆಗೂ ಜನರಲ್ ವಾರ್ಡ್​ನಲ್ಲೇ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಸೂಕ್ತ ಚಿಕಿತ್ಸೆ ದೊರೆಯದೇ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಇದೀಗ ಮೃತನ ಕುಟುಂಬಸ್ಥರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ