Breaking News
Home / ರಾಜ್ಯ / ಐಸಿಯುಗೆ ಸ್ಥಳಾಂತರಿಸಲು ಕೇಳಿಕೊಂಡ್ರು ಜನರಲ್​ ವಾರ್ಡ್​ನಲ್ಲೇ ಚಿಕಿತ್ಸೆ: ಯುವಕ ಸಾವು

ಐಸಿಯುಗೆ ಸ್ಥಳಾಂತರಿಸಲು ಕೇಳಿಕೊಂಡ್ರು ಜನರಲ್​ ವಾರ್ಡ್​ನಲ್ಲೇ ಚಿಕಿತ್ಸೆ: ಯುವಕ ಸಾವು

Spread the love

ಚಿಕ್ಕಮಗಳೂರು: ಸರಿಯಾದ ಸಮಯಕ್ಕೆ ವೆಂಟಿಲೇಟರ್​ ಸಿಗದೇ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಮೇಘರಾಜ್(31) ಮೃತ ಯುವಕ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದ ನಿವಾಸಿ. ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯ ಜನರಲ್ ವಾರ್ಡ್​ನಲ್ಲಿ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದರಿಂದ ಐಸಿಯುಗೆ ಶಿಫ್ಟ್ ಮಾಡುವಂತೆ ಯುವಕ ಕೇಳಿಕೊಂಡಿದ್ದ.

ಆದರೆ, ಯುವಕನ ಮನವಿಯನ್ನು ಪುರಷ್ಕರಿಸಿದೇ ಕೊನೆಯ ಕ್ಷಣದವರೆಗೂ ಜನರಲ್ ವಾರ್ಡ್​ನಲ್ಲೇ ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಸೂಕ್ತ ಚಿಕಿತ್ಸೆ ದೊರೆಯದೇ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಇದೀಗ ಮೃತನ ಕುಟುಂಬಸ್ಥರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಅರ್ಥಿಂಗ್ ಸಮಸ್ಯೆ – ಶೌಚಾಲಯಕ್ಕೆ ಬೀಗ, ಬಹಿರ್ದೆಸೆಗೆ ಮಹಿಳೆಯರ ಅಲೆದಾಟ

Spread the loveಸಿಂಧನೂರು: ನಗರದ ವಾರ್ಡ್ ನಂ.19ರ ವ್ಯಾಪ್ತಿಗೊಳಪಡುವ ಶರಣಬಸವೇಶ್ವರ ಕಾಲೊನಿಯಲ್ಲಿ ಸಾರ್ವಜನಿಕ ಮಹಿಳಾ ಶೌಚಾಲಯಕ್ಕೆ ಬೀಗ ಹಾಕಿರುವ ಘಟನೆ ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ