Breaking News

ಕೋವಿಡ್ ಕೇರ್ ಸೆಂಟರ್ ಆರಂಭಿಸದೇ ನಿರ್ಲಕ್ಷ್ಯ – ಶಾಸಕ, ಡಿಎಚ್‍ಒಗೆ ತರಾಟೆ

Spread the love

ಧಾರವಾಡ: ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸದೇ ನಿರ್ಲಕ್ಷ್ಯ ತೊರಿದ ಶಾಸಕ ಹಾಗೂ ಡಿಎಚ್‍ಒ ಮೇಲೆ ಅಳ್ನಾವರ ಪಟ್ಟಣ ಪಂಚಾಯತಿ ಸದಸ್ಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಧಾರವಾಡ ಕಲಘಟಗಿ ಕ್ಷೇತ್ರದ ಶಾಸಕ ಸಿ.ಎಂ. ನಿಂಬಣ್ಣವರ ಅಧ್ಯಕ್ಷತೆಯಲ್ಲಿ ಅಳ್ನಾವರದಲ್ಲಿ ನಡೆದಿದ್ದ ಸಭೆಯಲ್ಲಿ ಪಟ್ಟಣದಲ್ಲಿ ಹೆಚ್ಚಾಗಿರುವ ಕೊರೊನಾ ಬಗ್ಗೆ ಪ್ರಸ್ತಾಪಿಸಿದ ಪಟ್ಟಣ ಪಂಚಾಯತಿ ಸದಸ್ಯರು, ಈಗ ಬಂದು ಸಭೆ ಮಾಡುತ್ತಿದ್ದಿರಾ ಎಂದು ಪ್ರಶ್ನೆ ಮಾಡಿದ್ದಾರೆ.

ತಾಲೂಕು ಕೇಂದ್ರವಾಗಿದ್ದರೂ ಆರೋಗ್ಯ ಸೌಲಭ್ಯ ಒದಗಿಸದ್ದಕ್ಕೆ ತರಾಟೆಗೆ ತೆಗೆದುಕೊಂಡ ಸದಸ್ಯರಿಗೆ ಶೀಘ್ರವೇ ಅಳ್ನಾವರದಲ್ಲಿ ಕೋವಿಡ್ ಕೇರ್ ಆರಂಭಿಸುವ ಭರವಸೆಯನ್ನು ಶಾಸಕರು ನೀಡಿದರು.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ