ಬೆಂಗಳೂರು : ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.
ಖಾಸಗಿ ಸುದ್ದಿ ವಾಹಿನಿಯಲ್ಲಿ ಹಿರಿಯ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ನಾರಾಯಣ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ . ಒಂದು ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ಕಂಡು ಬಂದಿತ್ತು . ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ .
ಲಕ್ಷ್ಮೀ ನಾರಾಯಣ ಅವರು ಈಟಿವಿ ನ್ಯೂಸ್ ಕನ್ನಡ , ಪವರ್ ಟಿ ವಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದರು