Breaking News
Home / ರಾಜ್ಯ / ಯಾದಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಕೋವಿಡ್‌ಗೆ ಬಲಿ

ಯಾದಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಕೋವಿಡ್‌ಗೆ ಬಲಿ

Spread the love

ಕಲಬುರ್ಗಿ: ಕಲಬುರ್ಗಿಯ ಕರುಣೇಶ್ವರ ನಗರದ ನಿವಾಸಿ, ಯಾದಗಿರಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ಬುದ್ಧೇಶ್ ಶಂಕರ ಸಿಂಗೆ (53) ಅವರು ಸೊಲ್ಲಾಪುರದ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ಕೊರೊನಾ ಸೋಂಕಿನಿಂದ ಬಳಲಿದ್ದ ಅವರು ಚಿಕಿತ್ಸೆಯ ನಂತರ ಗುಣಮುಖರಾಗಿ ಮರಳಿದ್ದರು. ಆದರೆ, ಕೆಲವೇ ದಿನಗಳಲ್ಲಿ ಮತ್ತೆ ಅವರಿಗೆ ಬಹು ಅಂಗಾಂಗ ವೈಫಲ್ಯ ಕಂಡುಬಂದಿದ್ದರಿಂದ ಸೊಲ್ಲಾಪುರದ ವೈದ್ಯರು ಕಪ್ಪುಶಿಲೀಂದ್ರ (ಬ್ಲ್ಯಾಕ್‌ ಫಂಗಸ್‌) ಸೋಂಕು ಇರಬಹುದು ಎಂದು ಶಂಕಿಸಿದ್ದರು.ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಅವರ ಸ್ವಂತ ಊರಾದ ಅಫಜಲಪುರ ತಾಲ್ಲೂಕಿನ ಗೌರ (ಬಿ) ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ