Breaking News
Home / ರಾಜಕೀಯ / ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್: ಸಿದ್ದರಾಮಯ್ಲ

ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್: ಸಿದ್ದರಾಮಯ್ಲ

Spread the love

ಕೋಲಾರ: ಕೊರೊನಾ ತಜ್ಞರು ವರದಿ ಕೊಟ್ಟಿದ್ದರೂ ಕೂಡ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಸರ್ಕಾರ ಸತ್ತೇ ಹೋಗಿದೆ. ರಾಜ್ಯದಲ್ಲಿ ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ ಬರುವ ಮುನ್ಸೂಚನೆ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮಾನಗೆಟ್ಟ ಸರ್ಕಾರವನ್ನು ನಾನು ನೋಡಿರಲಿಲ್ಲ. ಸುಳ್ಳೇ ಅವರ ಮನೆ ದೇವರು, ಸರ್ಕಾರ ನಡೆಸಕ್ಕಾಗಲ್ಲ ಎಂದರೆ ಬಿಟ್ಟು ಹೋಗಿ ಎಂದಿದ್ದೆ. ಆದರೆ ಬಿಟ್ಟು ಹೋಗಿಲ್ಲ ಇಂತಹ ಸತ್ತಿರುವ ಸರ್ಕಾರವನ್ನು ನಾನು ನೋಡಿರಲಿಲ್ಲ ಎಂದು ಗುಡುಗಿದ್ದಾರೆ.

ನಮಗೆ ಆಕ್ಸಿಜನ್ 1700 ಮೆಟ್ರಿಕ್ ಟನ್ ಬೇಕು. ಅಷ್ಟು ನಮಗೆ ಸಿಗುತ್ತಿಲ್ಲ. ಸರ್ಕಾರ ಸತ್ತುಹೋಗಿದೆ ಯಡಿಯೂರಪ್ಪ ಒಬ್ಬ ಅಸಮರ್ಥ ಮುಖ್ಯಮಂತ್ರಿ. ಇಂಥ ಬಂಡರನ್ನು ನೋಡಿಲ್ಲ, ನಿಮ್ಮ ಕೈಲಿ ಆಗೋದಿಲ್ಲ ಅಂದ್ರೆ ಬಿಡಿ. ನೀವು ಅದನ್ನು ಮಾಡುತ್ತಿಲ್ಲ. ನಾವಾದ್ರು ಬಂದು ಏನಾದ್ರು ಮಾಡುತ್ತೇವೆ ಎಂದು ಲೇವಡಿ ಮಾಡಿದರು.

ಚಾಮರಾಜನಗರ ಆಕ್ಸಿಜನ್ ದುರಂತ ಕುರಿತು ಮಾತನಾಡಿದ ಸಿದ್ದರಾಮಯ್ಯ, ಸುಧಾಕರ್ ಎಂಬ ಒಬ್ಬ ಹೆಲ್ತ್ ಮಿನಿಸ್ಟರ್ ಇದ್ದಾನೆ. ಅವನು ಆಕ್ಸಿಜನ್ ಕೊರತೆಯಿಂದ ಮೂವರು ಸತ್ತಿದ್ದಾರೆ ಎಂದು ಹೇಳಿದ್ದಾನೆ. ಅಲ್ಲಿನ ಡಾಕ್ಟರ್ ಹೇಳ್ತಾರೆ 28 ಜನ ಸತ್ತಿದ್ದಾರೆ ಎಂದು. ಈ ಸರ್ಕಾರ ಬರಿ ಸುಳ್ಳು ಹೇಳುತ್ತಾ ಕಾಲ ಕಳೆಯುತ್ತಿದೆ ಎಂದು ಟೀಕಿಸಿದರು.

ಕೊರೊನಾ ಹಳ್ಳಿಗಳಿಗೂ ಹಬ್ಬಿದೆ. ಹಾಗಾಗಿ ಪ್ರತಿಯೊಬ್ಬರು ಎಚ್ಚರಿಕೆಯಿಂದ ಇರಬೇಕು. ರೋಗವನ್ನ ತಡೆಗಟ್ಟಬೇಕು ಎಂದರೆ ಎಲ್ಲರೂ ವ್ಯಾಕ್ಸಿನ್ ಮಾಡಿಸಿಕೊಳ್ಳಬೇಕು. ವ್ಯಾಕ್ಸಿನ್ ಮನೆ ಮನೆಗೆ ಹೋಗಿ ಕೊಡಬೇಕು ಅದಕ್ಕಾಗಿ ಸುಮಾರು 10 ಪತ್ರ ಬರೆದಿದ್ದೇನೆ. ಪ್ರತಿಯೋಬ್ಬರು ಮಾಸ್ಕ್ ಹಾಕಿಕೊಳ್ಳಿ ಸಾಧ್ಯವಾದ್ರೆ ಎರಡು ಮಾಸ್ಕ್ ಹಾಕಿಕೊಳ್ಳಿ ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ