Breaking News

‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’: ಡಿ.ಕೆ ಶಿವಕುಮಾರ್

Spread the love

ಬೆಂಗಳೂರು: ‘ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡಲು ಕಾಂಗ್ರೆಸ್ ರೂಪಿಸಿರುವ ₹ 100 ಕೋಟಿ ಯೋಜನೆಗೆ ಸರ್ಕಾರ ಅನುಮತಿ ನೀಡಲಿ. ನಾವೂ ಸರ್ಕಾರದ ಜತೆ ಕೈಜೋಡಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಜನರ ಜೀವ ಉಳಿಸುವುದು ಮುಖ್ಯ. ಅದೇ ನಮ್ಮ ಮೊದಲ ಆದ್ಯತೆ. ಅಭಿವೃದ್ಧಿ ಕಾರ್ಯಗಳನ್ನು ನಂತರ ಮಾಡಿಕೊಳ್ಳೋಣ. ಈ ಕಾರಣಕ್ಕೆ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯ ಹಣವನ್ನು ಲಸಿಕೆಗೆ ಬಳಸಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದರು.

ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ. ಶಾಸಕರ ನಿಧಿ 2 ಕೋಟಿ ರುಪಾಯಿಯಲ್ಲಿ ಶೇ.25 ರಷ್ಟು ಅನುದಾನ ಬಳಸಿಕೊಳ್ಳಲು ಸರ್ಕಾರ ಹೇಳಿದೆ. ಹಾಸಿಗೆ, ವೆಂಟಿಲೇಟರ್ ಖರೀದಿಗೆ ಬಳಸಲು ಅನುಮತಿ ಇದೆ. ಹೀಗಾಗಿ ನಾವು 100 ಕೋಟಿ ಮೊತ್ತದ ಕಾರ್ಯಕ್ರಮ ರೂಪಿಸಿ, ಸರ್ಕಾರದ ಅನುಮತಿ ಕೋರಿದ್ದೇವೆ.

ನಮ್ಮಲ್ಲಿ ಒಟ್ಟು 93 ಶಾಸಕರು ಹಾಗೂ ಪರಿಷತ್ ಸದಸ್ಯರಿದ್ದು, ಉಳಿದ ಮೊತ್ತವನ್ನು ನಮ್ಮ ಕಾರ್ಯಕರ್ತರ ಬಳಿ ಭಿಕ್ಷೆ ಎತ್ತಾದರೂ ಸಂಗ್ರಹಿಸುತ್ತೇವೆ. ಈ ಜನಪರ ಕೆಲಸಕ್ಕೆ ಸರ್ಕಾರ ಅನುಮತಿ ನೀಡಲಿ. ನಾವು ಕೂಡ ಸರ್ಕಾರದ ಜತೆ ಕೈ ಜೋಡಿಸಿ ಜನ ಸೇವೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ