Breaking News
Home / ಜಿಲ್ಲೆ / ಬೆಂಗಳೂರು / ಬಳ್ಳಾರಿ, ಉತ್ತರ ಕನ್ನಡ, ಹಾಸನ, ಬೆಳಗಾವಿ, ಮೈಸೂರುಜಿಲ್ಲಾಧಿಕಾರಿಗಳ ವಿರುದ್ಧ ಸಿಎಂ ಗರಂ

ಬಳ್ಳಾರಿ, ಉತ್ತರ ಕನ್ನಡ, ಹಾಸನ, ಬೆಳಗಾವಿ, ಮೈಸೂರುಜಿಲ್ಲಾಧಿಕಾರಿಗಳ ವಿರುದ್ಧ ಸಿಎಂ ಗರಂ

Spread the love

ಬೆಂಗಳೂರು; ಹಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ, ಸೋಂಕು ನಿಯತ್ರಣಕ್ಕೆ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ. ಜನರು ಸಾಯುತ್ತಿದ್ದರೂ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರು ನಿರ್ಲಕ್ಷ್ಯ ಮಾಡುತ್ತಿರುವುದೇಕೆ ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆದ ಘಟನೆ ನಡೆದಿದೆ.

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಹಾಗೂ ಕೊರೊನಾ ಸ್ಥಿತಿಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, ಸೋಂಕು ನಿಯಂತ್ರಣಕ್ಕೆ ಸರ್ಕಾರ ಜಾರಿಮಾಡಿರುವ ಬಿಗಿ ಕ್ರಮಗಳನ್ನು ಸಮರ್ಪಕವಾಗಿ ಜಾರಿ ಮಾಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವಿಟಿ ನಿಯಂತ್ರಿಸಲು ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ? ಜನರನ್ನು ಉಳಿಸಲು ಅಧಿಕಾರಿಗಳು ಕೈಗೊಂಡಿರುವ ಕ್ರಮಗಳಾದರೂ ಏನು ಎಂದು ಪ್ರಶ್ನಿಸಿರುವ ಸಿಎಂ, ಬಳ್ಳಾರಿ, ಉತ್ತರ ಕನ್ನಡ, ಹಾಸನ, ಬೆಳಗಾವಿ, ಮೈಸೂರು ಸೇರಿದಂತೆ ಸೋಂಕು ಹೆಚ್ಚುತ್ತಿರುವ 7 ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಹೆಚ್ಚಿಸುವಂತೆ ತಾಕೀತು ಮಾಡಿದ್ದಾರೆ. ಅಲ್ಲದೇ ಜಿಲ್ಲೆಗಳಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಮೊದಲ ಡೋಸ್ ಗಳನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ