Breaking News

ಅರಬ್ಬಿ ಸಮುದ್ರದಲ್ಲಿ ದುರಂತಕ್ಕೀಡಾಗಿದ್ದ ಬೋಟ್ 9 ಜನರ ರಕ್ಷಣೆ

Spread the love

ಮಂಗಳೂರು: ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಎನ್ ಎಂಪಿಟಿ ಟಗ್ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೋಟ್ ನಲ್ಲಿದ 9 ಜನರನ್ನು ರಕ್ಷಣೆ ಮಾಡಲಾಗಿದೆ.

ಚಂಡಮಾರುತದಿಂದಾಗಿ ಅಲೆಗಳ ಅಬ್ಬರಕ್ಕೆ ಸಿಲುಕಿ ಟಗ್ ಬೋಟ್ ಶನಿವಾರ ಅರಬ್ಬಿ ಸಮುದ್ರದಲ್ಲಿ ಮಗುಚಿಬಿದ್ದಿತ್ತು. ಕಾಪುವಿನ ದೀಪಸ್ತಂಭದಿಂದ 13 ನಾಟಿಕಲ್ ಮೈಲಿ ದೂರದಲ್ಲಿ ಈ ದುರಂತ ಸಂಭವಿಸಿತ್ತು. ಇಬ್ಬರು ಈಜಿ ದಡ ಸೇರಿದ್ದರೆ ಬೋಟ್ ನಲ್ಲಿದ್ದ 9 ಜನರು ಸಂಕಷ್ಟಕ್ಕಿಡಾಗಿದ್ದರು. ಬೋಟ್ ನಲ್ಲಿದ್ದವರ ರಕ್ಷಣೆಗಾಗಿ ಕೋಸ್ಟ್ ಗಾರ್ಡ್ ನಿನ್ನೆಯಿಂದ ಹರಸಾಹಸಪಟ್ಟಿತ್ತು. ಅಂತಿಮವಾಗಿ ಇಂದು ಕೊಚ್ಚಿಯ ನೇವಿ ಹೆಲಿಕಾಪ್ಟರ್ ರಕ್ಷಣಾ ಕಾರ್ಯಾಚರಣೆಗೆ ಆಗಮಿಸಿದ್ದು, ಇದೀಗ 9 ಜನರನ್ನು ರಕ್ಷಿಸಲಾಗಿದೆ.

ಸ್ಪೀಡ್ ಬೋಟ್ ಮೂಲಕ 5 ಜನರನ್ನು ರಕ್ಷಿಸಲಾಗಿದ್ದರೆ 4 ಜನರನ್ನು ಹೆಲಿಕಾಪ್ಟರ್ ಮೂಲಕ ರಕ್ಷಿಸಲಾಗಿದೆ. ಎಲ್ಲಾ 9 ಜನರನ್ನು ಮಂಗಳೂರು ವೆನಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

Spread the love ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ