Breaking News

ʼಲಾಕ್​ ಡೌನ್ʼ​ ವಿಸ್ತರಣೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಚಿವ ಮುರುಗೇಶ್​ ನಿರಾಣಿ

Spread the love

ರಾಜ್ಯದಲ್ಲಿ ಲಾಕ್​ಡೌನ್​ ಆದೇಶದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಲಾಕ್​ಡೌನ್​​ ಆದೇಶವನ್ನ ಮುಂದುವರಿಸಲಿದ್ಯಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ. ಇದೇ ವಿಚಾರವಾಗಿ ಕಲಬುರಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್​ ನಿರಾಣಿ ಲಾಕ್​ಡೌನ್​ ಮುಂದುವರಿಕೆ ಬಗ್ಗೆ ಸೂಚನೆ ನೀಡಿದ್ರು.

ಕಳೆದ ಮೂರು ದಿನಗಳಿಂದ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡುಬರ್ತಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕನ್ನ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗ್ತಿದೆ. ಸದ್ಯದ ಪರಿಸ್ಥಿತಿ ನೋಡ್ತಿದ್ರೆ ಲಾಕ್​ಡೌನ್​ ಮುಂದುವರಿಸೋದೇ ಉತ್ತಮ ಎನಿಸ್ತಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪರಿಗೂ ಮನವಿ ಮಾಡಿದ್ದೇನೆ. ಇನ್ನೂ ಹತ್ತು ದಿನಗಳ ಲಾಕ್​ಡೌನ್​ ಅವಧಿ ವಿಸ್ತರಿಸಿದ್ರೆ ಉತ್ತಮ ಅನ್ನೋದು ನನ್ನ ಅಭಿಪ್ರಾಯವಾಗಿದೆ ಎಂದು ಹೇಳಿದ್ರು.

ಇನ್ನು ರಾಜ್ಯದಲ್ಲಿ ಆಕ್ಸಿಜನ್​ ಅಭಾವದ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವ್ರು, ರಾಜ್ಯದಲ್ಲಿ ಪ್ರಾಣವಾಯುವಿನ ಕೊರತೆ ನೀಗಿಸಲು ಗಣಿ ಇಲಾಖೆಯಿಂದ 10 ಟ್ಯಾಂಕರ್​ ನೀಡ್ತಿದ್ದೇವೆ. ಹತ್ತು ದಿನದಲ್ಲಿ ಪ್ರತಿ ವಿಭಾಗಕ್ಕೆ ಎರಡೆರಡು ಆಕ್ಸಿಜನ್​ ಟ್ಯಾಂಕರ್​ ನೀಡಲಾಗುತ್ತದೆ. ಮೂರನೇ ಅಲೆಗೆ ಬೇಕಾದ ಎಲ್ಲಾ ಕ್ರಮಗಳನ್ನ ನಾವು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದ್ರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ