Breaking News

ಸೋಂಕಿತರಿಂದ ಸುಲಿಗೆ- ಖಾಸಗಿ ಆಸ್ಪತ್ರೆಗಳ ಮೇಲೆ ಅಧಿಕಾರಿಗಳ ದಾಳಿ

Spread the love

ಬೆಂಗಳೂರು: ಕೊರೊನಾ ಸೋಂಕಿತರಿಂದ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆಸ್ಪತ್ರೆಗಳ ಮೇಲೆ ಅಧಿಕಾರಿಗಳು ದಾಳಿ ಮುಂದುವರಿಸಿದ್ದು, ಇಂದೂ ಸಹ ಹಲವು ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.

ಎಡಿಜಿಪಿ ಸುನೀಲ್ ಅಗರ್‍ವಾಲ್, ಐಎಎಸ್ ಉಮಾ ಮಹಾದೇವನ್ ತಂಡದಿಂದ ಪರಿಶೀಲನೆ ನಡೆಸಲಾಗಿದ್ದು, ಸರ್ಜಾಪುರ ರಸ್ತೆಯ ಕೊಲಂಬಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಂದ ಹೆಚ್ಚುವರಿ ಹಣ ಪಡೆದಿರುವುದು ಪತ್ತೆಯಾಗಿದೆ. 14 ಸೋಂಕಿತರಿಂದ 5,02,245 ರೂ.ಗಳನ್ನ ಪಡೆದಿದ್ದು, ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆದಿರುವುದು ದಾಳಿ ವೇಳೆ ಪತ್ತೆಯಾಗಿದೆ. ಹೆಚ್ಚುವರಿಯಾಗಿ ಪಡೆದಿರುವ ಹಣವನ್ನು ಸೋಂಕಿತ ಬ್ಯಾಂಕ್ ಖಾತೆಗೆ ಮರಳಿ ಜಮೆ ಮಾಡುವಂತೆ ಅಧಿಕಾರಿಗಳು ಆಸ್ಪತ್ರೆಗೆ ಸೂಚಿಸಿದ್ದಾರೆ. ಅಲ್ಲದೆ ಸೋಂಕಿತರಿಂದ ಹೆಚ್ಚುವರಿ ಹಣ ವಸೂಲಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಅವ್ಯವಹಾರ; ಲೋಕಾಯುಕ್ತ ದಾಳಿ!

Spread the love *ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಅವ್ಯವಹಾರ; ಲೋಕಾಯುಕ್ತ ದಾಳಿ! ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಲೋಕಾಯುಕ್ತರ ದಾಳಿ! ಡಿಡಿಪಿಐ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ