Breaking News

300 ಮಂದಿಯ ಅಂತ್ಯಕ್ರಿಯೆ ನಡೆಸಿದ್ದ ಅಧಿಕಾರಿ ಕೋವಿಡ್ ನಿಂದ ಸಾವು

Spread the love

ಹರಿಯಾಣ : ಹರಿಯಾಣದ ಹಿಸಾರ್‌ನಲ್ಲೊಂದು ಮನಮಿಡಿಯುವ ಘಟನೆ ನಡೆದಿದೆ. ಕಳೆದ ವರ್ಷ ಕೊರೊನಾ ಶುರುವಾದಾಗಿನಿಂದ ಇಲ್ಲಿಯವರೆಗೆ 300 ಕೊರೊನಾ ಪೀಡಿತರ ಶವದಹನಕ್ಕೆ ನೆರವಾಗಿದ್ದ, ಅಂತಿಮ ಕ್ರಿಯೆಗಳನ್ನು ವಿಧಿವತ್ತಾಗಿ ನಡೆಸಿದ್ದ ಹಿಸಾರ್‌ ನಗರಪಾಲಿಕೆ ಅಧಿಕಾರಿಯೊಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಅದೂ ಸೋಂಕಿದೆ ಎಂದು ಗೊತ್ತಾಗಿ ಎರಡೇ ದಿನಗಳಲ್ಲಿ!

43 ವರ್ಷದ ಪ್ರವೀಣಕುಮಾರ್‌; ಸೋಮವಾರ ರಾತ್ರಿ ಆಮ್ಲಜನಕ ಪ್ರಮಾಣ ತೀವ್ರ ಇಳಿಕೆಯಾಗಿದ್ದರಿಂದ ಅಸು ನೀ ಗಿ ದ್ದಾ ರೆ. ಅವರನ್ನು ಕಳೆದವರ್ಷ ಶವಸಂಸ್ಕಾರ ತಂಡದ ಮುಖ್ಯಸ್ಥರನ್ನಾಗಿ ಹಿಸಾರ್‌ ನಗರಪಾಲಿಕೆ ನೇಮಿಸಿತ್ತು.

ಇಲ್ಲಿಯವರೆಗೆ ತಮ್ಮ ಕರ್ತವ್ಯವನ್ನು ಅವರು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ಜನರಿಂದ ಮೆಚ್ಚುಗೆ ಪಡೆದುಕೊಂಡಿದ್ದರು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು!


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ