Breaking News

(ಸಿಇಟಿ-2020) ಅಬಾಧಿತವಾಗಿ ನಿಗದಿಯಂತೆ ನಡೆಯಲಿದೆ.

Spread the love

ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-2020) ಅಬಾಧಿತವಾಗಿ ನಿಗದಿಯಂತೆ ನಡೆಯಲಿದೆ. ಕೋವಿಡ್19 ಹರಡುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​, ಸಿಇಟಿ ಪರೀಕ್ಷೆ ನಿಗದಿಪಡಿಸಿ 2020ರ ಮೇ 13 ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲು ನಿರಾಕರಿಸಿದೆ.

ಈ‌ ಕುರಿತು ಬಿ.ಆರ್. ಉಲ್ಲಾಸ್ ಮತ್ತು‌ ಅಬ್ಬುಲ್ಲಾ‌ ಖಾನ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅಜಿರ್ಯನ್ನು ಬುಧವಾರ ಮೂರು ಗಂಟೆಗೂ ಅಧಿಕ ಸಮಯ ವಿಚಾರಣೆ ನಡೆಸಿದ ನ್ಯಾಯಮೂತಿರ್ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ, ಸಿಇಟಿ ಪರೀಕ್ಷೆ ಗೆ ತಡೆ ನೀಡಲು ನಿರಾಕರಿಸಿತು.

# ಹೈಕೋರ್ಟ್ ಹೇಳಿದ್ದೇನು?
ಪರೀಕ್ಷೆ ಗೆ ಹಾಜರಾಗಲಿರುವ ಎಲ್ಲ ವಿದ್ಯಾಥಿರ್ಗಳಿಗೂ ಎಸ್ಒಪಿ ಅನುಸಾರ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು. ಒಂದೊಮ್ಮೆ ಕೋವಿಡ್&19 ಸೋಂಕು ಉಳ್ಳವರು ಮುಂಚಿತವಾಗಿ ಮಾಹಿತಿ ನೀಡಲು ವಿಲರಾಗಿದ್ದರೆ ಅಂಥವರಿಗೆ ಪರೀಕ್ಷೆ ಅವಕಾಶ ನಿರಾಕರಿಸಬಾರದು.

# ಸೋಂಕಿತ ಅಭ್ಯಥಿರ್ಗಳಷ್ಟೇ ಅಲ್ಲದೆ ಸೋಂಕು ರಹಿತ ಅಭ್ಯಥಿರ್ಗಳಿಗೂ ಅವರ ಮನವಿ ಮೇರೆಗೆ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು.

# ಕೋವಿಡ್&19 ತಡೆಗೆ ಆರೋಗ್ಯ ಸಚಿವಾಲಯ ರೂಪಿಸಿರುವ ಮಾರ್ಗಸೂಚಿಗಳು ಹಾಗೂ ಸಿಇಟಿ ಆಯೋಜನೆಗಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಎಸ್ಒಪಿ ಅನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು.

# ಕಂಟೇನ್ಮೆಂಟ್ ವಲಯಗಳಲ್ಲಿರುವ ವಿದ್ಯಾಥಿರ್ಗಳು ತಮ್ಮ ಪ್ರವೇಶಪತ್ರ ತೋರಿಸಿದರೆ ಆ ವಿದ್ಯಾಥಿರ್ಗಳಿಗೆ ಪಾಲಕರೊಂದಿಗೆ ಹೊರ ಬರಲು ಅವಕಾಶ ಕಲ್ಪಿಸಬೇಕು. ಈ ವಿಚಾರವಾಗಿ ಪೊಲೀಸ್ ಹಾಗೂ ಆರೋಗ್ಯ ಸಿಬ್ಬಂದಿಗೆ ಅಗತ್ಯ ನಿರ್ದೇಶನ ನೀಡಬೇಕು.


Spread the love

About Laxminews 24x7

Check Also

ಮೇಶ್ ಜಾರಕಿಹೊಳಿ ವಿರುದ್ಧ ಸುಳ್ಳು ಸುದ್ದಿ: ₹20 ಕೋಟಿ ಮಾನನಷ್ಟ ಕೇಸ್‌

Spread the loveಬೆಳಗಾವಿ: ಅಸ್ತಿತ್ವದಲ್ಲಿ ಇಲ್ಲದ ಖಾಸಗಿ ಮಾಧ್ಯಮದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಸುದ್ದಿಯನ್ನು ಅಪಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ