Home / ರಾಜ್ಯ / ಕರೆ ಮಾಡಿ ಸಹಾಯ ಕೇಳಿದ ಮಹಿಳೆ, ಮಂಚಕ್ಕೆ ಕರೆದ ಭೂಪ

ಕರೆ ಮಾಡಿ ಸಹಾಯ ಕೇಳಿದ ಮಹಿಳೆ, ಮಂಚಕ್ಕೆ ಕರೆದ ಭೂಪ

Spread the love

ಗದಗ: ಗಂಡನಿಗೆ ಕೆಲಸ ಕೊಡಿಸುವಂತೆ ಸಹಾಯ ಕೇಳಿದ ಮಹಿಳೆಯನ್ನು ಮುಖಂಡನೊಬ್ಬ ಮಂಚಕ್ಕೆ ಆಹ್ವಾನಿಸಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ಗದಗ ತಾಲೂಕಿನ ಹುಯಿಲಗೋಳ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿ ವಿರುದ್ಧ ಇಂತಹ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿಯಲ್ಲಿ 18 ವರ್ಷಗಳಿಂದ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಎರಡು ತಿಂಗಳ ಹಿಂದೆ ಕೈಗೆ ಪೆಟ್ಟಾಗಿ ವಿಶ್ರಾಂತಿ ಪಡೆದಿದ್ದ. ಆತ ಸರಿಯಾಗಿ ಕೆಲಸ ಮಾಡದ ಕಾರಣ ಪಂಚಾಯಿತಿಯವರು ಕೆಲಸಕ್ಕೆ ಸರಿಯಾಗಿ ಬರದಿದ್ದ ಬರಬೇಡ ಎಂದು ಹೇಳಿದ್ದಾರೆ.

ಪಂಚಾಯಿತಿ ಅಧಿಕಾರಿಗಳು ಕೆಲಸಕ್ಕೆ ಬರದಂತೆ ಸೂಚನೆ ನೀಡಿದ್ದರಿಂದ ನೌಕರ ಮನೆಯಲ್ಲೇ ಉಳಿದಿದ್ದಾನೆ. ನೌಕರನ ಪತ್ನಿ ಮುಖಂಡನಾಗಿರುವ ಪಂಚಾಯಿತಿಯ ಸದಸ್ಯೆಯ ಗಂಡನ ಬಳಿ ಕೆಲಸಕ್ಕೆ ಸೇರಿಸುವಂತೆ ಸಹಾಯ ಕೇಳಿದ್ದಾಳೆ. ಆಕೆಯ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಳ್ಳಲು ಮುಂದಾದ ಮುಖಂಡ ಗಂಡನಿಗೆ ಕೆಲಸ ಕೊಡಿಸುವುದಾಗಿ ಹೇಳಿ ಮಂಚಕ್ಕೆ ಆಹ್ವಾನಿಸಿದ್ದಾನೆ. ಕರೆ ಮಾಡಿದ ಮಹಿಳೆಯನ್ನು ಆಹ್ವಾನಿಸಿದ ಆಡಿಯೋ ವೈರಲ್ ಆಗಿದ್ದು, ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ