ಗದಗ: ಗಂಡನಿಗೆ ಕೆಲಸ ಕೊಡಿಸುವಂತೆ ಸಹಾಯ ಕೇಳಿದ ಮಹಿಳೆಯನ್ನು ಮುಖಂಡನೊಬ್ಬ ಮಂಚಕ್ಕೆ ಆಹ್ವಾನಿಸಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.
ಗದಗ ತಾಲೂಕಿನ ಹುಯಿಲಗೋಳ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿ ವಿರುದ್ಧ ಇಂತಹ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿಯಲ್ಲಿ 18 ವರ್ಷಗಳಿಂದ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಎರಡು ತಿಂಗಳ ಹಿಂದೆ ಕೈಗೆ ಪೆಟ್ಟಾಗಿ ವಿಶ್ರಾಂತಿ ಪಡೆದಿದ್ದ. ಆತ ಸರಿಯಾಗಿ ಕೆಲಸ ಮಾಡದ ಕಾರಣ ಪಂಚಾಯಿತಿಯವರು ಕೆಲಸಕ್ಕೆ ಸರಿಯಾಗಿ ಬರದಿದ್ದ ಬರಬೇಡ ಎಂದು ಹೇಳಿದ್ದಾರೆ.
ಪಂಚಾಯಿತಿ ಅಧಿಕಾರಿಗಳು ಕೆಲಸಕ್ಕೆ ಬರದಂತೆ ಸೂಚನೆ ನೀಡಿದ್ದರಿಂದ ನೌಕರ ಮನೆಯಲ್ಲೇ ಉಳಿದಿದ್ದಾನೆ. ನೌಕರನ ಪತ್ನಿ ಮುಖಂಡನಾಗಿರುವ ಪಂಚಾಯಿತಿಯ ಸದಸ್ಯೆಯ ಗಂಡನ ಬಳಿ ಕೆಲಸಕ್ಕೆ ಸೇರಿಸುವಂತೆ ಸಹಾಯ ಕೇಳಿದ್ದಾಳೆ. ಆಕೆಯ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಳ್ಳಲು ಮುಂದಾದ ಮುಖಂಡ ಗಂಡನಿಗೆ ಕೆಲಸ ಕೊಡಿಸುವುದಾಗಿ ಹೇಳಿ ಮಂಚಕ್ಕೆ ಆಹ್ವಾನಿಸಿದ್ದಾನೆ. ಕರೆ ಮಾಡಿದ ಮಹಿಳೆಯನ್ನು ಆಹ್ವಾನಿಸಿದ ಆಡಿಯೋ ವೈರಲ್ ಆಗಿದ್ದು, ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.
Laxmi News 24×7