Breaking News
Home / ಜಿಲ್ಲೆ / ರಾಯಚೂರು / ಸಕಾಲಕ್ಕೆ ಆಕ್ಸಿಜನ್ ಒದಗಿಸಿ 50 ರೋಗಿಗಳ ಜೀವ ಉಳಿಸಿದ ಕಾಂಗ್ರೆಸ್ ಯುವ ನಾಯಕ

ಸಕಾಲಕ್ಕೆ ಆಕ್ಸಿಜನ್ ಒದಗಿಸಿ 50 ರೋಗಿಗಳ ಜೀವ ಉಳಿಸಿದ ಕಾಂಗ್ರೆಸ್ ಯುವ ನಾಯಕ

Spread the love

ರಾಯಚೂರು: ಸಿಂಧನೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಏಕಾಏಕಿ ಆಕ್ಸಿಜನ್ ಕೊರತೆ ಎದುರಾದ ಘಟನೆ ನಡೆದಿದ್ದು ಸಕಾಲಕ್ಕೆ ಕಾಂಗ್ರೆಸ್ ಯುವ ನಾಯಕ ಬಸನಗೌಡ ಬಾದರ್ಲಿ ಆಕ್ಸಿಜನ್ ಪೂರೈಸುವ ಮೂಲಕ 50 ಜನರ ಪ್ರಾಣ ಉಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗುತ್ತಿದ್ದಂತೆಯೇ ಸ್ವತಃ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಬಸನಗೌಡ ಬಾದರ್ಲಿ ಅವರಿಗೆ ಕರೆ ಮಾಡಿ ಆಕ್ಸಿಜನ್ ಒದಗಿಸುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ. ಕೆಲವೇ ಹೊತ್ತಿನಲ್ಲಿ ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ 15 ಜಂಬೋ ಸಿಲಿಂಡರ್​ಗಳನ್ನ ಆಸ್ಪತ್ರೆಗೆ ಪೂರೈಕೆ ಮಾಡಲಾಗಿದ್ದು 50 ಮಂದಿ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ.

ಅಲ್ಲದೇ ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಉಚಿತ ಆಕ್ಸಿಜನ್ ನೀಡಿ ಬಸನಗೌಡ ಬಾದರ್ಲಿ ಪ್ರಾಣ ಉಳಿಸುತ್ತಿದ್ದಾರೆ, ಫೌಂಡೇಶನ್ ವತಿಯಿಂದ ಬಡವರಿಗೆ ಸಹಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಯರಗುಂಟಿ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ: ಆಸ್ಪತ್ರೆಗೆ ದಾಖಲು

Spread the love ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಗುಂಟಿ ಗ್ರಾಮದಲ್ಲಿ 10ಕ್ಕೂ ಜನರು ವಾಂತಿ – ಭೇದಿಯಿಂದ ಅಸ್ವಸ್ಥರಾಗಿದ್ದು, ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ