Breaking News
Home / ರಾಜ್ಯ / ಬಿಡಿಸಲು ಬಂದ ಕುಟುಂಬಸ್ಥರಿಗೆ ಪೊಲೀಸ್​ ಇನ್ಸ್​ಪೆಕ್ಟರ್​ ಕೈ ಮುಗಿದ ಬೇಡಿಕೊಂಡ ಘಟನೆ

ಬಿಡಿಸಲು ಬಂದ ಕುಟುಂಬಸ್ಥರಿಗೆ ಪೊಲೀಸ್​ ಇನ್ಸ್​ಪೆಕ್ಟರ್​ ಕೈ ಮುಗಿದ ಬೇಡಿಕೊಂಡ ಘಟನೆ

Spread the love

ವಿಜಯನಗರ: ಲಾಕ್​ಡೌನ್​ ಸಂದರ್ಭದಲ್ಲಿ ಅನಗತ್ಯವಾಗಿ ಹೊರ ಬಂದವರನ್ನು ಬಿಡಿಸಲು ಬಂದ ಕುಟುಂಬಸ್ಥರಿಗೆ ಪೊಲೀಸ್​ ಇನ್ಸ್​ಪೆಕ್ಟರ್​ ಕೈ ಮುಗಿದ ಬೇಡಿಕೊಂಡ ಘಟನೆ ಹೊಸಪೇಟೆಯ ಉದ್ಯೋಗ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಸರ್​ ನನ್ನ ತಮ್ಮನನ್ನು ಬಿಟ್ಟುಬಿಡಿ ಎಂದು ವ್ಯಾಪಾರಿಯೊಬ್ಬರು ಕೇಳಿಕೊಂಡು ಬಂದಿದ್ದರು. ಈ ವೇಳೆ ಮಾತನಾಡಿದ ಇನ್ಸ್​ಪೆಕ್ಟರ್​, ದಯಮಾಡಿ ನಿಮಗೆ ಕೈ ಮುಗಿದು ಕೇಳುವೆ ಜನರನ್ನು ಬದುಕಿಸಿ ಎಂದರು.

ನಿಮಗೆ ದುಡ್ಡು ಬೇಕು, ನಮಗೆ ಜನ ಬೇಕು. ನಾವು ಕೂಡ ಹೆಂಡತಿ ಮಕ್ಕಳನ್ನು ಬಿಟ್ಟು ಸಮಾಜಕ್ಕಾಗಿ ಬಂದಿದ್ದೇವೆ. ಜನ ಮತ್ತು ಇಡೀ ಸಮಾಜ ಬದುಕಬೇಕಿದೆ, ದಯಮಾಡಿ ನಿಯಮ ಪಾಲಿಸಿ ಎಂದು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಶ್ರೀನಿವಾಸ್​ ಕೈ ಮುಗಿದರು.

ಕಠಿಣ ಲಾಕ್​​ಡೌನ್ ಹಿನ್ನೆಲೆಯಲ್ಲಿ ಅನಗತ್ಯವಾಗಿ ಹೊರ ಬಂದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರೊನಾ ಕಂಟ್ರೋಲ್​ಗೆ ಹೊಸಪೇಟೆಯಲ್ಲಿ ಎರಡನೇ ದಿನ ಬಿಗಿ ಕ್ರಮ ತೆಗೆದುಕೊಳ್ಳಲಾಗಿದೆ. ಪೊಲೀಸರು ಹೊರಗಡೆ ಕುಳಿತಿದ್ದವರನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ