Breaking News

ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳು ನಾಳೆಯಿಂದ ಸೀಲ್​ಡೌನ್

Spread the love

ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿದ್ದು, ದಿನೇದಿನೆ ಸೋಂಕಿತರ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ನಾಳೆ ಬೆಳಗ್ಗೆ 10 ಗಂಟೆಯಿಂದ ಸೀಲ್​​ಡೌನ್​ ಜಾರಿ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್​ ತಿಳಿಸಿದ್ದಾರೆ.
ಉತ್ತರಕನ್ನಡದ ಸಿದ್ದಾಪುರ, ಶಿರಸಿ, ಯಲ್ಲಾಪುರ ಮತ್ತು ಮುಂಡಗೋಡು ಪಟ್ಟಣಗಳು ನಾಳೆಯಿಂದ ಮೇ 24ರ ಸಂಜೆಯವರೆಗೆ ಸೀಲ್​ಡೌನ್ ಆಗಲಿವೆ. ಇನ್ನು ಉಳಿದ ಎಲ್ಲ ತಾಲೂಕುಗಳು ಶನಿವಾರ ಮತ್ತು ಭಾನುವಾರ ಮಾತ್ರ ಸೀಲ್​ಡೌನ್​ ಆಗಲಿವೆ ಎಂದು ಹೆಬ್ಬಾರರು ಹೇಳಿದ್ದಾರೆ.

ನಾಲ್ಕು ತಾಲೂಕುಗಳ ಜನರು ನಾಳೆ ಬೆಳಗ್ಗೆ 10ಗಂಟೆಯೊಳಗೆ ನಾಲ್ಕೈದು ದಿನಗಳಿಗಾಗುವಷ್ಟು ಅಗತ್ಯ ವಸ್ತುಗಳನ್ನು ಖರೀದಿ ಮಾಡಿಕೊಳ್ಳಬೇಕು. ಮೇ 24ರವರೆಗೂ ಸೀಲ್​ಡೌನ್ ಮುಂದುವರಿಯಲಿದ್ದು, ಅದರ ನಂತರ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ತರಕಾರಿ, ಹಣ್ಣುಹಂಪಲು, ಹೂವು, ಹಾಲನ್ನು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ತಳ್ಳುವ ಗಾಡಿ ಮೂಲಕ ಪೂರೈಸಲು ಅವಕಾಶ ಮಾಡಿಕೊಡಲಾಗುತ್ತದೆ. ದಿನಸಿ ಸಾಮಗ್ರಿಗಳನ್ನು ಅಗತ್ಯವಿರುವಷ್ಟನ್ನು ನಾಳೆಯೇ ಖರೀದಿಸಬೇಕು. ಕೊರೊನಾ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಶಿವರಾಮ ಹೆಬ್ಬಾರ್​ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ