Breaking News

ಕುಮಾರಸ್ವಾಮಿ ಅವರೀಗೇ ಬಿಜೆಪಿ ಮೇಲೆ ಸ್ವಲ್ಪ ಲವ್ ಆಗಿದೆ.:ಹೊರಟ್ಟಿ

Spread the love

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿಕೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ. ಈ ಕುರಿತು ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡರು ಸಭೆ ಕರೆದು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

, ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರ ಮೇಲೆ ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ. ಆದರೆ ಅವರು ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎಂಬುದಕ್ಕೆ ಅವರೇ ಸ್ಪಷ್ಟನೆ ನೀಡಬೇಕು. ಕುಮಾರಸ್ವಾಮಿಯವರ ಮೇಲೆ ಬಂದಿರುವ ಈ ಆರೋಪಕ್ಕೆ ಅವರೇ ಪ್ರತಿಕ್ರಿಯೆ ನೀಡಲಿ. ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ. ಹೀಗಾಗಿ ಕುಮಾರಸ್ವಾಮಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ತಿಳಿಸಿದ್ದಾರೆ.

 

ಬಿಜೆಪಿ ಸರ್ಕಾರ ಬಂದ ಮೇಲೆ ನೆರೆ ಪ್ರವಾಹ, ಕೋವಿಡ್ ಹಾವಳಿ ಹೆಚ್ಚಾಗಿತ್ತು. ಹೀಗಾಗಿ ಕುಮಾರಸ್ವಾಮಿ ಬಿಜೆಪಿ ಸರ್ಕಾರ ಮೇಲೆ ಸಾಪ್ಟ್ ಕಾರ್ನರ್ ಹೊಂದಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ. ಕುಮಾರಸ್ವಾಮಿ ಹಾಗೂ ದೇವೇಗೌಡರು ಸಭೆ ಕರೆಯಲಿ. ಸಭೆಯ ಮೂಲಕ ಕುಮಾರಸ್ವಾಮಿ ತಮ್ಮ ಸ್ಪಷ್ಟ ನಿಲುವು ತಿಳಿಸಲಿ. ಸಿ.ಪಿ.ಯೋಗೇಶ್ವರ್ ಸದುದ್ದೇಶದಿಂದ ಬಿಜೆಪಿಗೆ ಆಹ್ವಾನ ನೀಡರಬಹುದು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಕಾಂಗ್ರೆಸ್ ನಮ್ಮ ಸರ್ಕಾರ ಕೆಡವಿತು. ಅದು ಸತ್ಯ ಸಹ, ಹೀಗಾಗಿ ಕುಮಾರಸ್ವಾಮಿ ಸಾಫ್ಟ್ ಕಾರ್ನರ್ ಹೊಂದಿರಬಹುದು ಎಂದು ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ಬಂದ ಮೇಲೆ ನೆರೆ ಪ್ರವಾಹ, ಕೋವಿಡ್ ಹಾವಳಿ ಹೆಚ್ಚಾಗಿತ್ತು. ಹೀಗಾಗಿ ಕುಮಾರಸ್ವಾಮಿ ಬಿಜೆಪಿ ಸರ್ಕಾರ ಮೇಲೆ ಸಾಪ್ಟ್ ಕಾರ್ನರ್ ಹೊಂದಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ. ಕುಮಾರಸ್ವಾಮಿ ಹಾಗೂ ದೇವೇಗೌಡರು ಸಭೆ ಕರೆಯಲಿ. ಸಭೆಯ ಮೂಲಕ ಕುಮಾರಸ್ವಾಮಿ ತಮ್ಮ ಸ್ಪಷ್ಟ ನಿಲುವು ತಿಳಿಸಲಿ. ಸಿ.ಪಿ.ಯೋಗೇಶ್ವರ್ ಸದುದ್ದೇಶದಿಂದ ಬಿಜೆಪಿಗೆ ಆಹ್ವಾನ ನೀಡರಬಹುದು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಕಾಂಗ್ರೆಸ್ ನಮ್ಮ ಸರ್ಕಾರ ಕೆಡವಿತು. ಅದು ಸತ್ಯ ಸಹ, ಹೀಗಾಗಿ ಕುಮಾರಸ್ವಾಮಿ ಸಾಫ್ಟ್ ಕಾರ್ನರ್ ಹೊಂದಿರಬಹುದು ಎಂದು ತಿಳಿಸಿದ್ದಾರೆ.

 

ಹೊಸ ಸರ್ಕಾರ ಬಂದ ಮೇಲೆ ಪ್ರವಾಹ, ಕೊರೊನಾ ಬಂತು ಹೀಗಾಗಿ ವಿನಾಕಾರಣ ತೊಂದರೆ ಕೊಡಬಾರದು ಎಂಬ ಉದ್ದೇಶದಿಂದ ಸಾಫ್ಟ್ ಕಾರ್ನರ್ ಹೊಂದಿದ್ದೇವೆ. ಒಂದೊಂದು ಸಲ ಪ್ರೀತಿ ಜಾಸ್ತಿಯಾಗುತ್ತೆ. ಅದೇ ರೀತಿ ಇದೀಗ ಬಿಜೆಪಿ ಮೇಲೆ ಸ್ವಲ್ಪ ಲವ್ ಆಗಿದೆ. ರಾಜಕಾರಣದಲ್ಲಿ ಯಾವುದನ್ನೂ ಊಹಿಸಲು ಸಾಧ್ಯವಿಲ್ಲ. ಇಂದಿನ ರಾಜಕೀಯ ಸನ್ನಿವೇಶದಲ್ಲಿ ತತ್ವ ಸಿದ್ಧಾಂತಗಳಿಲ್ಲ. ಪರಿಸ್ಥಿತಿ ಹೇಗಿರುತ್ತದೆಯೋ ಆ ರೀತಿ ಬದಲಾಗುತ್ತಾರೆ ಹೊರಟ್ಟಿ ಹೇಳಿದ್ದಾರೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ