Breaking News

ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಶುಕ್ರವಾರ ಆಟೋ ಚಾಲಕರಿಗೆ ರೇಷನ್ ಕಿಟ್ ಗಳನ್ನು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.

Spread the love

ಬೆಳಗಾವಿ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಶುಕ್ರವಾರ ಆಟೋ ಚಾಲಕರಿಗೆ ರೇಷನ್ ಕಿಟ್ ಗಳನ್ನು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.
ಈ ಕೊರೋನಾ ಸಂದರ್ಭದಲ್ಲಿ ಯಾವುದೇ ದುಡಿಮೆಯಿಲ್ಲದೆ ಜನ ಪರಿತಪಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಕಿಂಚಿತ್ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಲಕ್ಷ್ಮಿ ತಾಯಿ ಫೌಂಡೇಶನ್  ಈ ನೆರವು ನೀಡುತ್ತಿದೆ. ಆಸ್ಪತ್ರೆಯಲ್ಲಿರುವ ಎಷ್ಟೋ ರೋಗಿಗಳಿಗೆ, ಅವರ ಸಹಾಯಕರಿಗೆ ಆಹಾರ, ನೀರು ಸಿಗುತ್ತಿಲ್ಲ. ಹಾಗಾಗಿ ಅವರಿಗೆ ಆಹಾರದ ಕಿಟ್ , ನೀರಿನ ಬಾಟಲ್, ಮಾತ್ರೆಯ ಕಿಟ್ ಗಳು, ಮಾಸ್ಕ್, ಸ್ಯಾನಿಟೈಜರ್ ಮುಂತಾದ ವಸ್ತುಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.
 
ಯಾವುದೇ ರಾಜಕಾರಣ, ಪ್ರತಿಷ್ಠೆ, ಸ್ವಾರ್ಥ ಇಲ್ಲದೆ ಬಡವರ ಕಣ್ಣೀರು ಒರೆಸುವ ಏಕೈಕ ಉದ್ದೇಶದಿಂದ ಈ ಸೇವೆಗಳನ್ನು ಮಾಡಲಾಗುತ್ತಿದೆ. ಎಲ್ಲರೂ ಕೈಲಾದಷ್ಟು ಸಹಾಯ ಮಾಡಲು ಮುಂದೆ ಬರಲಿ, ಅಂತವರಿಗೆ ಪ್ರೇರಣೆಯಾಗಲಿ ಎನ್ನುವ ಉದ್ದೇಶದಿಂದ ಇದನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇನೆ. ಇದರಲ್ಲಿ ರಾಜಕೀಯ ಹುಡುಕಬೇಡಿ ಎಂದು ಅವರು ವಿನಂತಿಸಿದ್ದಾರೆ.
ಈ ಹಿಂದೆ ಕೂಡ ಪ್ರವಾಹದ ಸಂದರ್ಭದಲ್ಲಿ, ಕೊರೋನಾದ ಮೊದಲ ಅಲೆಯ ಸಂದರ್ಭದಲ್ಲಿ ಲಕ್ಷ್ಮಿ ತಾಯಿ ಫೌಂಡೇಶನ್ ಮಾಡಿದ ಜನ ಸೇವೆಯನ್ನು ಲಕ್ಷಾಂತರ ಜನ ಪ್ರಶಂಸಿಸಿದ್ದಾರೆ, ಪ್ರೋತ್ಸಾಹಿಸಿದ್ದಾರೆ. ಅಂತವರಿಗೆಲ್ಲ ಧನ್ಯವಾದ ಸಲ್ಲಿಸುತ್ತ, ಆದಷ್ಟು ಶೀಘ್ರ ಜನರು ಈ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಬ್ಬಾಳಕರ್ ಹೇಳಿದ್ದಾರೆ.

Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ