Breaking News

ಲಾಕ್‍ಡೌನ್, ಬೇಸರ ಕಳೆಯಲು ಮೀನು ಹಿಡಿಯಲು ತೆರಳಿದ ಇಬ್ಬರೂ ನೀರುಪಾಲು

Spread the love

ಕಾರವಾರ: ಲಾಕ್‍ಡೌನ್ ನಲ್ಲಿ ಬೇಸರ ಕಳೆಯಲೆಂದು ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಆಘಾತಕಾರಿ ಘಟನೆ ಅಂಕೋಲಾ ತಾಲೂಕಿನ ಬಸಾಕಲ್ ಗುಡ್ಡದ ಸಮೀಪ ನಡೆದಿದೆ.
ಅಂಕೋಲಾದ ಬೆಳಾಬಂದರ್ ನಿವಾಸಿ ಸಂದೀಪ ಬೀರಪ್ಪ ನಾಯ್ಕ (30), ಚೇತನ ನಾಗೇಶ ನಾಯ್ಕ (23) ನೀರುಪಾಲಾದವರಾಗಿದ್ದು, ಸಂದೀಪ ನಾಯ್ಕ ಮೃತ ದೇಹ ಪತ್ತೆಯಾಗಿದೆ. ನಾಪತ್ತೆಯಾದ ಇನ್ನೋರ್ವನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲಿದ್ದು ಬೇಸರಗೊಂಡಿದ್ದ ಇಬ್ಬರು ಯುವಕರು ಮೀನು ಹಿಡಿಯಲೆಂದು ಬಸಾಕಲ್ ಸಮೀಪ ಸಮುದ್ರಕ್ಕೆ ತೆರಳಿದ್ದರು. ಆದರೆ ಈ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದ್ದು, ಇನ್ನಷ್ಟೆ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಇನ್ನೊರ್ವನಿಗೆ ಹುಡುಕಾಟ ನಡೆಸಲಾಗುತ್ತಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ