Breaking News

ಧಾರವಾಡದಲ್ಲಿ ಎರಡು ದಿನದ ಸಂಪೂರ್ಣ ಲಾಕ್ ಡೌನ್: ಜನತೆಯಿಂದ ಉತ್ತಮ ಬೆಂಬಲ

Spread the love

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಎರಡು ದಿನಗಳ ಸಂಪೂರ್ಣ ಲಾಕ್ ಡೌನ್ ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.‌ ಜನರು ಮನೆಯಿಂದ ಹೊರ ಬರದೆ ಲಾಕ್ ಡೌನ್ ಗೆ ಬೆಂಬಲ ಸೂಚಿಸಿದ್ದು, ಅಗತ್ಯವಿರುವ ವಾಹನಗಳ ಸಂಚಾರ ಯಥಾವತ್ತಾಗಿ ನಡೆದಿದೆ.‌

ಡಿಸಿಪಿ ಕೆ.ರಾಮರಾಜನ್ ಅವರು ನಗರ ಪ್ರದಕ್ಷಿಣೆ ಹಾಕುತ್ತಿದ್ದು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡುತ್ತಿದ್ದಾರೆ.

ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಪೊಲೀಸ್ ತಪಾಸಣೆ ಬಿಗಿ ಗೊಳಿಸಲಾಗಿದ್ದು ಅನಗತ್ಯ ಹಾಗೂ ಸುಳ್ಳು ಹೇಳಿ ಸಂಚರಿಸುತ್ತಿರುವ ವಾಹನಗಳಿಗೆ ಪೊಲೀಸರು ದಂಡ ಹಾಕುವುದು ಹಾಗೂ ವಾಹನಗಳನ್ನು ಸೀಜ್ ಮಾಡುತ್ತಿರುವುದು ಕಂಡು ಬಂದಿತು. ಜನ ಸಂಚಾರವಿಲ್ಲದೇ ನಗರದ ಎಲ್ಲ ರಸ್ತೆಗಳು ಬಿಕೋ ಎನ್ನುತ್ತಿವೆ.

ನಗರದ ಗೋಕುಲ ರಸ್ತೆ ವಾಕರಸಾ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ವಾಯವ್ಯ ಸಾರಿಗೆ ಸಂಸ್ಥೆಯ 45 ವರ್ಷದೊಳಗಿನವರಿಗೆ ಲಸಿಕೆ ಹಾಕುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಸಿಬ್ಬಂದಿ ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪು ಗುಂಪಾಗಿ ನಿಂತಿರುವುವುದು ಕಂಡು ಬಂದಿತು


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ