Breaking News

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

Spread the love

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ ಸಂಬಂಧ ಮೂಡಿಗೆರೆ ತಾಲೂಕಿನ ಗೋಣಿಬೀಡು ಪಿಎಸ್​ಐ ಅರ್ಜುನ್​ ವಿರುದ್ಧ ಶನಿವಾರ ಎಫ್​ಐಆರ್​ ದಾಖಲಾಗಿದೆ.

ಯುವಕ ಪುನೀತ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪುನೀತ್​ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ. ವಿವಾಹಿತ ಮಹಿಳೆಗೆ ಫೋನ್​ ಮಾಡಿದ ಆರೋಪ ಮೇಲೆ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು.

ವಿಚಾರಣೆ ಸಂದರ್ಭದಲ್ಲಿ ಜಾತಿನಿಂದನೆ ಮಾಡಿ, ಮೂತ್ರ ಕುಡಿಸಿದ್ದಾರೆಂದು ಅರ್ಜುನ್​ ವಿರುದ್ಧ ಪುನೀತ್​ ಗಂಭೀರ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜುನ್​ ವಿರುದ್ಧ ಐಪಿಸಿ ಸೆಕ್ಷನ್ 342, 323, 504, 506, 330 ಮತ್ತು 348 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣದ ಅಡಿಯಲ್ಲಿ ಕೇಸು ದಾಖಲಾಗಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ