Breaking News

ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ ಯುವಕನ ಮೊಬೈಲ್ ಒಡೆದು, ಕಪಾಳಮೋಕ್ಷ ಮಾಡಿದ ಜಿಲ್ಲಾಧಿಕಾರಿ

Spread the love

ರಾಯಪುರ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಹೊರ ಬಂದಿದ್ದ ಯುವಕನನ್ನು ಜಿಲ್ಲಾಧಿಕಾರಿಯೊಬ್ಬರು ತಡೆದಿದ್ದು, ಕಪಾಳಮೋಕ್ಷ ಮಾಡಿ ಮೊಬೈಲ್‌ ಕಸಿದು ಅದನ್ನು ಒಡೆದು ಹಾಕಿದ ಪ್ರಸಂಗ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ನಡೆದಿದೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗುತ್ತಿವೆ.

 

ವೈರಲ್ ಆಗಿರುವ ವಿಡಿಯೋದಲ್ಲಿ ಜಿಲ್ಲಾಧಿಕಾರಿ ರಣಬೀರ್ ಶರ್ಮಾ ವ್ಯಕ್ತಿಯೋರ್ವನ ಬಳಿಗೆ ಬಂದು ಆತನ ಬಳಿಯಿದ್ದ ಗುರುತಿನ ಚೀಟಿ ಪಡೆಯುತ್ತಾರೆ. ನಂತರ ಮೊಬೈಲ್ ಫೋನ್ ಕೇಳಿ, ಆತ ಮೊಬೈಲ್​ ಕೊಟ್ಟ ತಕ್ಷಣ ಅದನ್ನು ನೆಲಕ್ಕೆಸೆಯುತ್ತಾರೆ. ನಂತರ ಸಿಟ್ಟಿಗೆದ್ದು ವ್ಯಕ್ತಿಯ ಕಪಾಳಕ್ಕೂ ಹೊಡೆಯುತ್ತಾರೆ.

https://twitter.com/Anurag_Dwary/status/1396148617686044673?ref_src=twsrc%5Etfw%7Ctwcamp%5Etweetembed%7Ctwterm%5E1396148617686044673%7Ctwgr%5E%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Flaakdounniyamaullanghanemaadidhayuvakanamobailodedukapaalamokshamaadidhajillaadhikaari-newsid-n282247280

 

 

ಈ ವ್ಯಕ್ತಿಯನ್ನು ಸಾಹಿಲ್ ಗುಪ್ತಾ ಎಂದು ಗುರುತಿಸಲಾಗಿದ್ದು, ಕೋವಿಡ್ ನಿಯಮ ಉಲ್ಲಂಘಸಿದ ಕಾರಣಕ್ಕೆ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕ ಔಷಧ ತರಲು ಹೋಗಿದ್ದ ಎಂದು ತಿಳಿದು ಬಂದಿದೆ.

 


Spread the love

About Laxminews 24x7

Check Also

ಕ್ಯಾಬಿನೆಟ್‌ನಲ್ಲಿ ಕನಿಷ್ಠ ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ – ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

Spread the loveನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ