Breaking News

ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ ನೂರಾರು ಕೆ.ಜಿ ಅನ್ನ ಮಣ್ಣುಪಾಲಾಗಿದೆ.

Spread the love

ಬಳ್ಳಾರಿ: ಹಳ್ಳಿ ಹಳ್ಳಿಗೂ ಸೋಂಕು ಹಬ್ಬಿದ ಹಿನ್ನೆಲೆಯಲ್ಲಿ ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ, ಇದೀಗ ನೂರಾರು ಕೆಜಿ ಅನ್ನ ಮಣ್ಣುಪಾಲು ಮಡಿರುವ ಘಟನೆ ಬಳ್ಳಾರಿ ತಾಲೂಕಿನ ಡಿ ಕಗ್ಗಲ್ಲು ಗ್ರಾಮದಲ್ಲಿ ನಡೆದಿದೆ.

ಕೊರೊನಾ ದೂರವಾಗಲಿ ಅಂಥಾ ನೂರಾರು ಕೆಜಿ ಅನ್ನ ಮಣ್ಣುಪಾಲು ಮಾಡಿದ್ದಾರೆ. ಮನೆ ಮನೆಯಲ್ಲಿ ಅನ್ನ ಮಾಡಿಸಿ ರಾತ್ರಿ ವೇಳೆಯಲ್ಲಿ ಊರ ಆಚೆ ಚೆಲ್ಲಿ ಬಂದಿದ್ದಾರೆ. ಗ್ರಾಮದಲ್ಲಿ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಹಳ್ಳಿ ಜನತೆ ಮೂಢನಂಬಿಕೆ ಕಡೆ ಮುಖ ಮಾಡಿದ್ದಾರೆ.

ಬಳ್ಳಾರಿ ತಾಲೂಕಿನ ಡಿ ಕಗ್ಗಲ್ಲು ಗ್ರಾಮದಲ್ಲಿ ಪ್ರತಿ ಮನೆಯಲ್ಲಿ 5 ಕೆ.ಜಿ ಅನ್ನ ಮಾಡಿ ಒಂದು ಕಡೆ ಸಂಗ್ರಹ ಮಾಡುತ್ತಾರೆ. ಬಳಿಕ ಗ್ರಾಮದ ಹೊರಭಾಗದಲ್ಲಿ ಹೋಗಿ ನೆಲಕ್ಕೆ ಸುರಿದು ಬಂದಿದ್ದಾರೆ. ಒಂದು ಕಡೆ ತುತ್ತು ಅನ್ನಕ್ಕಾಗಿ ಪರದಾಡುವ ಜನ, ಮತ್ತೊಂದು ಕಡೆ ಮೂಢನಂಬಿಕೆಯಿಂದ ನೂರಾರು ಕೆ.ಜಿ ಅನ್ನ ಮಣ್ಣುಪಾಲಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ