Breaking News

ಫೋಟೋ ಮೇಲೆ ಹಾಲು ಸುರಿಯದೆ ಹಸಿದವರಿಗೆ ನೀಡಿ ಎಂದ ಸೋನು ಸೂದ್‌

Spread the love

ಮುಂಬೈ: ಕೊರೊನಾ ಸಂಕಷ್ಟದಲ್ಲಿ ನೆರವಿಗೆ ನಿಂತಿರು ಬಾಲಿವುಡ್ ನಟ ಸೋನು ಸೂದ್ ಅಭಿಮಾನಿಗಳಿಗೆ ದೊಡ್ಡ ಕರೆಯೊಂದನ್ನು ನೀಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
ದಯಮಾಡಿ ಎಲ್ಲರೂ ಹಾಲನ್ನು ಉಳಿಸಿ, ಅಗತ್ಯ ಇರುವವರಿಗೆ ನೀಡಿ. ಯಾರೂ ನನ್ನ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಬೇಡಿ ಎಂದು ಮನವಿ ಮಾಡಿಕೊಂಡು ಟ್ವೀಟ್ ಮಾಡಿ ಸೋನು ಅವರ ಭಾವ ಚಿತ್ರಕ್ಕೆ ಹಾಲಿನ ಅಭೀಷೆಕ ಮಾಡುತ್ತಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

ಆಂಧ್ರಪ್ರದೇಶದ ಕುರ್ನೂಲ್ ಮತ್ತು ನೆಲ್ಲೂರಿನಲ್ಲಿ ಸೋನು ಸೂದ್ ಫೋಟೋಗೆ ಹಾಲಿನ ಅಭಿಷೇಕ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೇ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಶೇರ್ ಮಾಡಿರುವ ಸೋನು ಸೂದ್, ಹಾಲನ್ನು ಹಾಳು ಮಾಡಬೇಡಿ ಅಗತ್ಯ ಇರುವವರಿಗೆ ನೀಡಿ ಎಂದು ಮನವಿ ಮಾಡಿದ್ದಾರೆ.

ಸೋನು ಸೂದ್ ಬಳಿ ಕಷ್ಟ ಹೇಳಿಕೊಂಡರೆ ಅದಕ್ಕೆ ಖಂಡಿತ ಪರಿಹಾರ ಸಿಗುತ್ತದೆ ಎಂಬ ಭರವಸೆ ಜನರಲ್ಲಿ ಮೂಡಿದೆ. ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡುತ್ತಿರುವ ಅವರನ್ನು ಜನರು ದೇವರ ರೀತಿ ನೋಡುತ್ತಾರೆ. ತಮಗೆ ಜನಿಸಿದ ಮಕ್ಕಳಿಗೆ ಸೋನು ಸೂದ್ ಎಂದು ಹೆಸರಿಟ್ಟು, ಸೋನು ಅವರಿಗೆ ದೇವಸ್ಥಾನ, ಹಾಲಿನ ಅಭಿಷೇಕ ಹೀಗೆ ಹಲವು ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿದವರೂ ಇದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ