Breaking News

ಪೊಲೀಸ್ ಇಲಾಖೆಗೆ ಸ್ವರ್ಣ ಉದ್ಯಮ ಸಮೂಹ ಸಂಸ್ಥೆಯು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಾಕ್ಸ್ ಗಳ ದೇಣಿಗೆ

Spread the love

ಹುಬ್ಬಳ್ಳಿ: ಮಹಾಮಾರಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಫ್ರಂಟ್ ಲೈನ್ ವಾರಿಯರ್ಸ್‍ಗಳಾಗಿರುವ ಪೊಲೀಸ್ ಇಲಾಖೆಗೆ ಸ್ವರ್ಣ ಉದ್ಯಮ ಸಮೂಹ ಸಂಸ್ಥೆಯು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಾಕ್ಸ್ ಗಳನ್ನ ದೇಣಿಗೆಯಾಗಿ ನೀಡಿ ಸಾಮಾಜಿಕ ಕಾರ್ಯ ಕೈಗೊಂಡಿದೆ.

ಸ್ವರ್ಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿ.ಎಸ್.ವಿ ಪ್ರಸಾದ್ ಅವರು 2100 ಮಾಸ್ಕ್ ಮತ್ತು 2100 ಸ್ಯಾನಿಟೈಸರ್ ಬಾಕ್ಸ್ ಗಳನ್ನು ವಿತರಣೆ ಮಾಡುವ ಮೂಲಕ ಪೊಲೀಸ್ ಸಿಬ್ಬಂದಿಗೆ ನೆರವು ನೀಡಿದ್ದಾರೆ.

ನವನಗರದಲ್ಲಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಡಿಸಿಪಿ ಕೆ. ರಾಮರಾಜನ್ ಅವರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಾಕ್ಸ್ ದೇಣಿಗೆಯಾಗಿ ನೀಡಿದ ವಿ.ಎಸ್.ವಿ ಪ್ರಸಾದ್ ಕೋವಿಡ್ ನಿರ್ಮೂಲನೆಯಾಗುವವರೆಗೂ ಪೊಲೀಸ್ ಇಲಾಖೆಗೆ ಇನ್ನೂ ಹೆಚ್ಚಿನ ಸಹಾಯ ಸಹಕಾರ ನೀಡುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಕೊರೊನಾ ಕಷ್ಟಕಾಲದಲ್ಲಿ ಸ್ವರ್ಣ ಸಮೂಹ ಸಂಸ್ಥೆಯೊಂದು ಸಾಮಾಜಿಕ ಕಾರ್ಯ ಕೈಗೊಂಡಿರುವುದು ಪೊಲೀಸ್ ಸಿಬ್ಬಂದಿಯ ಮೆಚ್ಚುಗೆಗೆ ಪಾತ್ರವಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ