Breaking News

ನಾಯಕತ್ವ ಬದಲಾವಣೆ ವಿಚಾರ; ವಿರೋಧಿ ಬಣಕ್ಕೆ ಟಾಂಗ್ ಕೊಟ್ಟ ಸಿಎಂ ಯಡಿಯೂರಪ್ಪ

Spread the love

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಾ, ದೆಹಲಿಯಲ್ಲಿ ಬೀಡು ಬಿಟ್ಟಿದ್ದ ನಾಯಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿ ಮುಟ್ಟಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಸಕಾಂಗ ಸಭೆ ವಿಚಾರದ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ. ನನ್ನ ಮುಂದೆ ಇರುವುದು ಕೋವಿಡ್ ನಿಯಂತ್ರಣ ಮಾತ್ರ. ಜನರ ಹಿತ ಕಾಯುವುದು ನನ್ನ ಮೊದಲ ಆದ್ಯತೆ. ಯಾರು ದೆಹಲಿಗೆ ಹೋಗಿ ಬಂದಿದ್ದಾರೋ ಅವರಿಗೆ ಅಲ್ಲಿಯೇ ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಹೇಳುವ ಮೂಲಕ ವಿರೋಧಿ ಬಣಗಳಿಗೆ ಟಾಂಗ್ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ, ಜನರು ಸಾವು ನೋವಿನಿಂದ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಚಿವರು, ಶಾಸಕರು ಎಲ್ಲರೂ ಒಗ್ಗಟ್ಟಾಗಿ ಜನರ ಸಂಕಷ್ಟ ನಿವಾರಿಸುವತ್ತ ಗಮನಕೊಡಬೇಕೇ ಹೊರತು ಬೇರೆ ವಿಚಾರಗಳ ಬಗ್ಗೆ ಅಲ್ಲ ಎಂದು ತಿರುಗೇಟು ನೀಡಿದರು.


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ