Breaking News

ಕೋವಿಡ್​ ಸೋಂಕಿತರ ಕುಟುಂಬಸ್ಥರಿಗೆ ಸ್ಥಳೀಯರ ಕಿರುಕುಳ.. ಬೆಂಕಿ ಹಚ್ಚಿಕೊಂಡು ಸಾಯ್ತೀವಿ. ಕಣ್ಣೀರಿಟ್ಟ ಮಹಿಳೆಯರು

Spread the love

ಅರಕಲಗೂಡು: ಕೋವಿಡ್ ಕೇರ್ ಸೆಂಟರ್​​​​​ಗೆ ದಾಖಲಾಗಿರುವ ರೋಗಿಗಳ ಕುಟುಂಬಸ್ಥರಿಗೆ ಗ್ರಾಮಸ್ಥರು ಬೆದರಿಕೆ ಹಾಕಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ.

ತಾಲೂಕಿನ ಎಚ್.ಆರ್.ಪಿ. ವಡ್ಡರಹಳ್ಳಿ ಗ್ರಾಮದ ವಿವಿಧ ಮನೆಯ ಐವರು ಪುರುಷರಿಗೆ ಕೋವಿಡ್ ಸೋಂಕು ದೃಢವಾಗಿದ್ದ ಹಿನ್ನೆಲೆ ಅವರೆಲ್ಲ ಕೋವಿಡ್ ಸೆಂಟರ್​​ಗೆ ದಾಖಲಾಗಿದ್ದರು. ಈ ವೇಳೆ, ಗ್ರಾಮದಲ್ಲಿ ರೋಗಿಯ ಕುಟುಂಬದಲ್ಲಿರುವ ಸದಸ್ಯರಿಗೆ ಬೆದರಿಕೆ ಹಾಕುತ್ತಿದ್ದು, ಮನೆಯಿಂದ ಹೊರ ಬಾರದಂತೆ ತಾಕೀತು ಮಾಡುತ್ತಿದ್ದಾರೆ ಎಂದು ಮಹಿಳೆಯೊಬ್ಬರು ವಿಡಿಯೋದಲ್ಲಿ ಆರೋಪಿಸಿದ್ದಾರೆ.

ನಮಗೆ ಅಗತ್ಯ ವಸ್ತುಗಳ ಖರೀದಿಗೂ ಹೊರ ಹೋಗಲು ಆಗುತ್ತಿಲ್ಲ. ಸರ್ಕಾರದಿಂದಲೂ ನಮಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿಲ್ಲ ನಾವು ಊಟ ತಿಂಡಿಗೆ ಏನು ಮಾಡಬೇಕು? ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಕಣ್ಣೀರು ಹಾಕಿ ಅಳಲು ತೋಡಿಕೊಂಡಿದ್ದಾರೆ.

ದೂರು ಕೊಡಲು ಅರಕಲಗೂಡು ಠಾಣೆಗೆ ಹೋದರೆ ಪೊಲೀಸರು ದೂರು ಸ್ವೀಕರಿಸುತ್ತಿಲ್ಲ, ನೀವು ಕುಳಿತುಕೊಂಡು ರಾಜಿ ಮಾಡಿಕೊಳ್ಳಿ ಎಂದು ಹಿಂತಿರುಗಿ ಕಳುಹಿಸಿದ್ದಾರೆ. ನಮಗೆ ರಕ್ಷಣೆ ನೀಡದಿದ್ದರೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು

Spread the loveಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ