Breaking News

ಸಚಿವರಿಂದಲೇ ಅಧಿಕಾರ ದುರುಪಯೋಗ , ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಆರೋಗ್ಯ ಸಚಿವರೇ ಭಾಗಿ?: ಹೆಚ್.ಎನ್.ರವೀಂದ್ರ ಆರೋಪ

Spread the love

ಬೆಂಗಳೂರು: ಬೆಂಗಳೂರು ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಆರೋಗ್ಯ ಸಚಿವರೇ ಭಾಗಿಯಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ವಿರುದ್ಧ ಐಎಂಎ ಮಾಜಿ ಅಧ್ಯಕ್ಷ ಹೆಚ್.ಎನ್.ರವೀಂದ್ರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ರವೀಂದ್ರ, ಆರೋಗ್ಯ ಸಚಿವ ಸುಧಾಕರ್ ಅವರೇ ಬೆಡ್ ಬ್ಲಾಕಿಂಗ್ ನಲ್ಲಿ ಶಾಮೀಲಾಗಿದ್ದಾರೆ. ಏರ್ ಪೋರ್ಟ್ ರಸ್ತೆಯಲ್ಲಿರುವ ಆಸ್ಟರ್ ಆಸ್ಪತ್ರೆಯಲ್ಲಿ ಬೆಡ್ ಬ್ಲಾಕ್ ಮಾಡಿಸಿದ್ದು, ವಾರ್ ರೂಂ ಪ್ರಕಾರ ಇವತ್ತಿಗೂ ಅಲ್ಲಿ ಬೆಡ್ ಖಾಲಿ ಇಲ್ಲ. ಆದರೆ ವಾಸ್ತವದಲ್ಲಿ ಆಸ್ಟರ್ ಆಸ್ಪತ್ರೆಯಲ್ಲಿ ಬೆಡ್ ಖಾಲಿಯಿದೆ ಕೊರೊನಾದಿಂದ ಜನರು ಆಸ್ಪತ್ರೆ, ಆಕ್ಸಿಜನ್ ಸಿಗದೇ ಪರದಾಡುತ್ತಿದ್ದರೂ ಆರೋಗ್ಯ ಸಹಿವರಿಂದಲೇ ಇಂತಹ ಪ್ರಕರಣ ನಡೆಯುತ್ತಿರುವುದು ದುರಂತ ಎಂದು ಕಿಡಿಕಾರಿದ್ದಾರೆ.

ಸಚಿವರಿಂದಲೇ ಅಧಿಕಾರ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ವೈದ್ಯರಾಗಿ, ಆರೋಗ್ಯ ಸಚಿವರಾಗಿ ಮಂತ್ರಿ ಸ್ಥಾನದಲ್ಲಿರಲು ಲಾಯಕ್ಕಿಲ್ಲ. ಒಂದು ವೇಳೆ ಸಚಿವ ಸುಧಾಕರ್ ಪ್ರಾಮಾಣಿಕವಾಗಿದ್ದರೆ ಶ್ವೇತಪತ್ರ ಹೊರಡಿಸಲಿ ಎಂದು ಸವಾಲು ಹಾಕಿದ್ದಾರೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ