Home / ರಾಜಕೀಯ / ಪತಿಯನ್ನು ಜಿಲ್ಲಾಸ್ಪತ್ರೆಗೆ ತಳ್ಳುಗಾಡಿಯಲ್ಲಿ ಕರೆತಂದ ಪತ್ನಿ

ಪತಿಯನ್ನು ಜಿಲ್ಲಾಸ್ಪತ್ರೆಗೆ ತಳ್ಳುಗಾಡಿಯಲ್ಲಿ ಕರೆತಂದ ಪತ್ನಿ

Spread the love

ಗದಗ: ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ ಡೌನ್‌ ಘೋಷಣೆಯಾಗಿದ್ದರಿಂದ ವಾಹನ ಸಿಗದೇ ಮಹಿಳೆಯೊಬ್ಬರು ಪತಿಯನ್ನು ಸುಮಾರು 4 ಕಿ.ಮೀ. ದೂರದ ಜಿಲ್ಲಾ ಆಸ್ಪತ್ರೆಗೆ ತಳ್ಳುಗಾಡಿಯಲ್ಲೇ ಕರೆದೊಯ್ದ ಮನಕಲುಕುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ.

ಇಲ್ಲಿನ ಸಿದ್ಧರಾಮೇಶ್ವರ ನಗರದ ಗೋವಿಂದಪ್ಪ ಎಂಬಾತ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ತಿಂಗಳ ಹಿಂದೆ ಶಸ್ತ್ರ ಚಿಕಿತ್ಸೆ ನಡೆಸಿದ್ದ ವೈದ್ಯರು ಒಂದು ಕಾಲು ತೆಗೆದಿದ್ದರು. ಇಂದು ಮತ್ತೆ ಚಿಕಿತ್ಸೆ ಪಡೆದು, ಕಾಲಿಗೆ ಡ್ರೆಸ್ಸಿಂಗ್‌ ಮಾಡಿಸಿಕೊಂಡು ಔಷಧತೆಗೆದುಕೊಂಡು ಹೋಗಲು ವೈದ್ಯರು ಸೂಚಿಸಿದ್ದರು. ಆದರೆ ಗುರುವಾರದಿಂದ ಜಿಲ್ಲಾದ್ಯಂತ ಸಂಪೂರ್ಣ ಲಾಕ್‌ಡೌನ್‌ ಘೋಷಣೆಯಾಗಿದ್ದರಿಂದ ಆಟೋ ಸೇರಿದಂತೆ ಯಾವುದೇ ವಾಹನಗಳು ಸಿಕ್ಕಿಲ್ಲ.

ದಾರಿ ಮಧ್ಯೆ ಕಾಣಿಸಿಕೊಂಡ ಒಂದೆರಡು ಆಟೋ ಚಾಲಕರೂ 300-400 ರೂ. ಬಾಡಿಗೆ ಕೇಳಿದ್ದರಿಂದ ಬಡ ಮಹಿಳೆ ಹಾಗೂ ಮಗ ಕೂಡಿಕೊಂಡು ನೀರಿನ ಕೊಡ ಸಾಗಿಸುವ ತಳ್ಳುಗಾಡಿಯಲ್ಲೇ ಗೋವಿಂದಪ್ಪನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.


Spread the love

About Laxminews 24x7

Check Also

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

Spread the love ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ