ಬಳ್ಳಾರಿ: ಕೊರೊನಾ ಸೋಂಕಿಗೆ ನಾಟಿ ಔಷಧ ನೀಡುತ್ತಿದ್ದ ಮಹಿಳೆಗೆ ಜಿಲ್ಲೆಯ ಸಂಡೂರು ತಾಲೂಕಿನ ತಹಶೀಲ್ದಾರ್ ರಶ್ಮಿ ಅವರು ಎಚ್ಚರಿಕೆ ನೀಡಿದ್ದು, ಯಾರಿಗೂ ಔಷಧಿ ನೀಡದಂತೆ ಸೂಚನೆ ಕೊಟ್ಟಿದ್ದಾರೆ.
ಸಂಡೂರು ತಾಲೂಕಿನ ಹಳೆ ದರೋಜಿ ಗ್ರಾಮದಲ್ಲಿ ಕೊರೊನಾಗೆ ಮಹಿಳೆಯೊಬ್ಬರು ನಾಟಿ ಔಷಧ ನೀಡುತ್ತಿದ್ದರು. ಈ ಔಷಧ ಪಡೆದರೆ ಕೊರೊನಾ ವಾಸಿಯಾಗುತ್ತೆ ಎಂದು ನಂಬಿರುವ ಹಲವರು ಔಷಧ ಪಡೆಯಲು ಮಹಿಳೆಯ ನಿವಾಸದ ಎದುರು ಆಗಮಿಸುತ್ತಿದ್ದರು.
ಮಹಿಳೆ ಮನೆಯಲ್ಲಿ ಔಷಧ ತಯಾರಿಸಿ ಜನರಿಗೆ ನೀಡುತ್ತಿದ್ದಾರೆ ಎಂಬ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಧವಿಸಿದ್ರು. ಸಂಡೂರು ತಹಶೀಲ್ದಾರ್ ರಶ್ಮಿ ಹಾಗೂ ತಾಲೂಕು ಆರೋಗ್ಯಧಿಕಾರಿ ಡಾ. ಕುಶಾಲ್ ರಾಜ್ ಬಂದು, ಸರ್ಕಾರದ ಅನುಮತಿ ಇಲ್ಲದೆ ಔಷಧ ನೀಡಬಾರದು ಎಂದು ಎಚ್ಚರಿಕೆ ನೀಡಿ, ಔಷಧ ನೀಡದಂತೆ ಮಹಿಳೆಯಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.