ಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ 10 ಆಕ್ಸಿಜನ್ ಕಾನ್ಸನ್ ಟ್ರೇಟರ್ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ನಿವಾಸದಲ್ಲಿ ನೀಡಿದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಸಂಕಲ್ಪ ಶೆಟ್ಟರ್, ಕಿಮ್ಸ್ ವೈದ್ಶಕೀಯ ಅಧೀಕ್ಷಕರಾದ ಡಾ. ಅರುಣ್ ಕುಮಾರ್, ಜಿಲ್ಲಾ ಜನಜಾಗ್ರತಿ ವೇದಿಕೆ ಅಧ್ಯಕ್ಷರು ರಾಜಣ್ಣ ಕೊರವಿ, ಕಾರ್ಪೋರೇಟರ್ ತಿಪ್ಪಣ್ಣ ಮಜ್ಜಗಿ, ವಿಶ್ವಮಾನ್ಶಪ್ರಶಸ್ತಿ ಪುರಸ್ಕೃತ ಸಂತೋಷ್ ಆರ್ ಶೆಟ್ಟಿ ಉಪಸ್ಥಿತರಿದ್ದರು.